ಬೆಂಗಳೂರು: ಐಎಎಸ್ ಅಧಿಕಾರಿ ಪಲ್ಲವಿ ಆಕುರಾತಿ ದೂರಿನ ಪ್ರಕರಣ ಕುರಿತು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದರೆ ಅವರು ಆರೋಪ ಮಾಡಿರುವ ಕಾಮಗಾರಿ ನಮ್ಮ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಆರೋಪ ಮಾಡಿರುವ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಅದು ಬಿಬಿಎಂಪಿ ವ್ಯಾಪ್ತಿಗೆ ಬರುತ್ತದೆ ಅಂತ ಸ್ಪಷ್ಟಪಡಿಸಿದ ಸಚಿವರು, ಕಾರ್ ಶೆಡ್ ನಿರ್ಮಿಸುವಂತೆ ಪಲ್ಲವಿ ಅವರು ಪತ್ರ ಬರೆದಿದ್ದರು. ಆದರೆ ಚುನಾವಣೆ ಹಿನ್ನಲೆಯಲ್ಲಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಅಂತ ಹೇಳಲಾಗಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಎಸ್ಗೆ ವರದಿ ನೀಡಲು ಸೂಚನೆ ನೀಡಿರುವೆ. ಹಣ ಕೊಟ್ಟರೆ ಕೆಲಸ ಆಗುತ್ತದೆ ಎನ್ನುವ ಆರೋಪಕ್ಕೆ ನನಗೆ ಮಾಹಿತಿ ಇಲ್ಲ ಎಂದು ಹೇಳಿ ಜಾರಿಕೊಂಡರು. ಇದನ್ನು ಓದಿ: PWDಯಲ್ಲಿ ದುಡ್ಡು ಕೊಟ್ರೆ ಮಾತ್ರ ಕೆಲಸ- ಪತ್ರ ಬರೆದು ದೂರು ಕೊಟ್ಟ ಮಹಿಳಾ ಅಧಿಕಾರಿ

ಅರಣ್ಯದಲ್ಲಿ ಆನೆ ಸಾವು ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಇದು ಲೋಕೋಪಯೋಗಿ ಇಲಾಖೆಗೆ ಬರುವುದಿಲ್ಲ. ಪ್ರಕರಣವು ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುತ್ತದೆ. ಅರಣ್ಯ ಮಾರ್ಗದಲ್ಲಿ ರಸ್ತೆಯ ಉಬ್ಬು ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಲಾಗುತ್ತದೆ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply