ಕ್ಷೇತ್ರದ ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ: ಕೈ ಶಾಸಕ ಶಿವಳ್ಳಿ

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಒಟ್ಟು 9 ಕಾಂಗ್ರೆಸ್ ಶಾಸಕರು ಜಯಗಳಿಸಿದ್ದೇವೆ. ಅವರಲ್ಲಿ ನಾನು ಹಿರಿಯ ಸ್ಥಾನದಲ್ಲಿದ್ದೆ. ಹೀಗಾಗಿ ನನಗೆ ಸಚಿವ ಸ್ಥಾನ ಸಿಗುತ್ತದೆ ಎನ್ನುವ ಭರವಸೆ ಇತ್ತು ಎಂದು ಶಾಸಕ ಎಸ್.ಸಿ.ಶಿವಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಕುರುಬ ಸಮಾಜದ ಪ್ರಭಾವಿ ವ್ಯಕ್ತಿಯಾಗಿರುವೆ. ಅಲ್ಲದೇ ಕುಂದಗೋಳ ವಿಧಾನಸಭೆ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ನನಗೆ ಸಚಿವ ಸ್ಥಾನ ಸಿಗುತ್ತದೆ ಎನ್ನುವ ಭರವಸೆ ಗಾಢವಾಗಿತ್ತು. ಆದರೆ ನನ್ನ ಹೆಸರು ಸಚಿವರ ಪಟ್ಟಿಯಲ್ಲಿ ಇಲ್ಲವೆಂದು ತಿಳಿದಿದ್ದು, ಭಾರೀ ನಿರಾಶೆ ಉಂಟಾಗಿದೆ ಎಂದು ಅವರು ಹೇಳಿದರು.

ಮುಂದಿನ ಕ್ರಮದ ಬಗ್ಗೆ ಕ್ಷೇತ್ರ ಕಾರ್ಯಕರ್ತರ ಜೊತೆಗೆ ಚರ್ಚೆ ನಡೆಸುತ್ತೇನೆ. ಅಲ್ಲಿಯವರೆಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡರಲ್ಲಿ ಆತಂಕ ಮೂಡಿಸಿದ್ದಾರೆ.

ಇತ್ತ ಕುಂದಗೋಳ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರು ಸಿ.ಎಸ್ ಶಿವಳ್ಳಿ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದು, ಪಕ್ಷದ ಮುಖಂಡರ ಜತೆ ಚರ್ಚೆಗೆ ಶಿವಳ್ಳಿ ನಕಾರ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *