ಜಿಲ್ಲೆ ವಿಭಜನೆ ಕುರಿತು ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿರಬೇಕು- ಶ್ರೀರಾಮುಲು

ಉಡುಪಿ: ಬಳ್ಳಾರಿ ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ನಾವು ಬದ್ಧರಾಗಿರಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ, ವಿಜಯಪುರವನ್ನು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಿಎಂ ಜೊತೆ ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇನೆ. ಆ ಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರುತ್ತೇವೆ. ಆ ಭಾಗ ಅಭಿವೃದ್ಧಿ ಅಗಬೇಕು ಅನ್ನೋದು ನನ್ನ ಅಭಿಪ್ರಾಯ. ದೊಡ್ಡ ಜಿಲ್ಲೆಯಾದ ಕಾರಣ ಬೇರೆ ಬೇರೆ ತೊಂದರೆ ಬರಬಾರದು ಎಂಬೂದು ನಮ್ಮ ದೃಷ್ಟಿಕೋನ ಎಂದರು.

ನಾನು ಎಲ್ಲರ ಜೊತೆ ಮಾತನಾಡಿ ತೀರ್ಮಾನಕ್ಕೆ ಬರುತ್ತೇನೆ ಹೊರತು, ನನ್ನ ಯಾವುದೇ ವೈಯಕ್ತಿಕ ತೀರ್ಮಾನ ಇಲ್ಲ. ಶಾಸಕ ಸೋಮಶೇಖರ್ ರೆಡ್ಡಿ ನನ್ನ ಸಹೋದರ. ಅವರು ನನ್ನ ಜೊತೆಗಿರುವ ಶಾಸಕ. ಅವರ ಜೊತೆ ಕುಳಿತು ಮಾತನಾಡಿ ಅಭಿಪ್ರಾಯ ಪಡೆದು ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದು ಹೇಳಿದರು.

ಸೋಮಶೇಖರ ರೆಡ್ಡಿ ಹೇಳಿದ್ದೇನು?
ಆನಂದ್ ಸಿಂಗ್ ರಾಜೀನಾಮೆಗೆ ನೀಡಿದ್ದಕ್ಕೆ ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನು ಕರೆದು ಸಿಎಂ ಬಿಎಸ್‍ವೈ ಚರ್ಚೆ ನಡೆಸಬೇಕು. ಈಗಾಗಲೇ ಸಿಎಂಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದರು.

Comments

Leave a Reply

Your email address will not be published. Required fields are marked *