ಧ್ವಜಾರೋಹಣ ನಂತ್ರ ತನ್ನ ಕಾರು ಹುಡುಕಾಡಿದ ಸಚಿವ ತುಕಾರಾಂ

ಬಳ್ಳಾರಿ: 70ನೇ ಗಣರಾಜೋತ್ಸವವನ್ನು ಬಳ್ಳಾರಿಯಲ್ಲೂ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಸಚಿವ ತುಕಾರಾಂ ಅವರು ಧ್ವಜಾರೋಹರಣ ನೆರವೇರಿಸಿ ಧ್ವಜವಂದನೆ ಸಲ್ಲಿಸಿದರು.

ತುಕಾರಾಂ ಅವರು ಪಥ ಸಂಚಲನ ನಡೆಸಿದ ವಿವಿಧ ದಳಗಳಿಂದ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ, ಎನ್‍ಸಿಸಿ ಹಾಗೂ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ಮಾಡಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರುಗಳು ಸೇರಿದಂತೆ ವಿವಿಧ ಮುಖಂಡರು ಭಾಗಿಯಾಗಿದ್ದರು.

ಬಳ್ಳಾರಿಯ ಮೋತಿ ವೃತ್ತದಲ್ಲಿ 150 ಅಡಿ ಎತ್ತರದ ಧ್ವಜಾರೋಹಣ ಮಾಡಿದ ನಂತರ ಸಚಿವ ತುಕಾರಾಂ ಅವರು ತಮ್ಮ ಕಾರಿಗಾಗಿ ಹುಡುಕಾಟ ನಡೆಸಿರುವುದು ಕಂಡುಬಂತು.

https://www.youtube.com/watch?v=YmPbLUj_aGo&feature=youtu.be

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *