ಸೋಮಣ್ಣನ ವಿರುದ್ಧ ಪೊಲೀಸರಿಗೆ ದೂರು ಕೊಡುವಂತೆ ವಿವಿಧ ಸಂಘಟನೆಗಳಿಂದ ಬೆದರಿಕೆ- ಮಹಿಳೆ ಆರೋಪ

ಚಾಮರಾಜನಗರ: ಸಚಿವ ವಿ. ಸೋಮಣ್ಣನ (V Somanna) ವಿರುದ್ಧ ಪೊಲೀಸರಿಗೆ (Police) ದೂರು ಕೊಡುವಂತೆ ವಿವಿಧ ಸಂಘಟನೆಗಳಿಂದ ಕೊಲೆ ಬೆದರಿಕೆ ಬರುತ್ತಿದೆ ಎಂದು ಮಹಿಳೆ (Woman) ಆರೋಪಿಸಿದ್ದಾರೆ.

ಎರಡು ದಿನಗಳ ಹಿಂದೆ ವಿ.ಸೋಮಣ್ಣ ಕಾರ್ಯಕ್ರಮವೊಂದರಲ್ಲಿ ಕೆಂಪಮ್ಮ ಎಂಬ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಳು. ಅದಾದ ಬಳಿಕ ಕೆಂಪಮ್ಮ ಮಾತನಾಡಿ, ಸಚಿವರು ನನಗೆ ಹೊಡೆದಿಲ್ಲ. ಅವರ ಮೇಲೆ ತಪ್ಪು ಅಪವಾದ ಹೊರಿಸಲಾಗುತ್ತಿದೆ ಎಂದು ಹೇಳಿದ್ದರು. ಆದರೆ ಇದೀಗ ವಿವಿಧ ಸಂಘಟನೆಗಳು ಸೋಮಣ್ಣ ವಿರುದ್ಧ ದೂರು ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕೆಂಪಮ್ಮ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಗುಂಡ್ಲುಪೇಟೆ ತಾಲೂಕಿನ ರೈತ ಸಂಘ, ತಾಲೂಕು ನಾಯಕ ಹಿತರಕ್ಷಣಾ ಸಮಿತಿ, ತಾಲೂಕು ದಸಂಸ, ತಾಲೂಕು ಕೆಆರ್‌ಎಸ್ ಪಾರ್ಟಿ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ಇದನ್ನೂ ಓದಿ: ನಂಗೆ ಎರಡು ಮುಖವಿಲ್ಲ, ಇರೋದು ಒಂದೇ ಮುಖ: ಹೆಚ್‍ಡಿಕೆಗೆ ಸೋಮಣ್ಣ ಟಾಂಗ್

ಕೆಂಪಮ್ಮ ದೂರಿನಲ್ಲಿ, ಸೋಮಣ್ಣ ಹೊಡೆದಿದ್ದಾರೆಂದು ಹೇಳಿಕೆ ನೀಡು. ಪೊಲೀಸರಿಗೆ ದೂರು ಕೊಡು. ಇಲ್ಲದಿದ್ದರೆ ವಾಸ ಮಾಡಲು ಬಿಡುವುದಿಲ್ಲ ಎಂದು ವಿವಿಧ ಸಂಘಟನೆಗಳಿಂದ ಪ್ರಾಣ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಪ್ರಕರಣ- ಸೋಮಣ್ಣ ಕ್ಷಮೆಯಾಚನೆ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *