ಮಂಡ್ಯ ಗರ್ಭಿಣಿ ಬಾಲಕಿಯ ಸಾವಿನ ಸುತ್ತ ಅನುಮಾನದ ಹುತ್ತ

ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಮೃತದೇಹ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಘಟನೆ ನಡೆದಿದೆ. ಬಾಲಕಿಯು ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ ಎಂದು ಪೋಷಕರು ಆರೋಪಿಸಿದ್ದಾರೆ.

 

ಬಾಲಕಿಯು ಕಳೆದ 15 ದಿನಗಳ ಹಿಂದೆ ಹೊಟ್ಟೆ ನೋವಿನ ಎಂದು ನರಳುತ್ತಿದ್ದಳು. ಇದರಿಂದಾಗಿ ಬಾಲಕಿಯನ್ನು ತಾಯಿ ಆಸ್ಪತ್ರೆಗೆ ಕರದೊಯ್ದಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಗರ್ಭಿಣಿ ಎಂಬುದನ್ನು ವೈದ್ಯರು ದೃಢಪಡಸಿದ್ದರು. ಈ ವಿಷಯ ತಿಳಿದ ತಾಯಿ ತನ್ನ ಅಪ್ರಾಪ್ತ ಮಗಳು ಗರ್ಭಿಣಿ ಎಂಬ ವಿಚಾರ ತಿಳಿದು ಕುಸಿದು ಬಿದ್ದಿದ್ದಳು. ನಂತರ ಸುಧಾರಿಸಿಕೊಂಡು ಈ ವಿಷಯದ ಬಗ್ಗೆ ಮಗಳನ್ನು ಕೇಳಿದಾಗ ಪಕ್ಕದ ಮನೆಯ ನಿವಾಸಿ ನೀಡಿದ್ದ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೊಂಡಿದ್ದಳು. ಇದನ್ನೂ ಓದಿ: ಎಂಜಿನಿಯರ್ ಮನೆಯಲ್ಲಿ 4 ಗಂಟೆ ದಾಳಿ ನಂತರ 60 ಲಕ್ಷ ರೂ. ಪತ್ತೆ

 

ಪರಮೇಶ್(50) ಎಂಬಾತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಆರೋಪಿ ಸವರ್ಣೀಯ ಎಂಬ ಕಾರಣಕ್ಕೆ ಮರ್ಯಾದೆಗೆ ಹೆದರಿ ವಿಚಾರವನ್ನು ತಾಯಿ ಮುಚ್ಚಿಟ್ಟಿದ್ದರು. ಮೃತ ಬಾಲಕಿಯ ತಾಯಿ ಗ್ರಾಮ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಮೊನ್ನೆ ಕೆಲಸದಿಂದ ವಾಪಸ್ ಆದಾಗ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: 20 ವರ್ಷದಿಂದ ಮಕ್ಕಳ ಅಶ್ಲೀಲ ಫೋಟೋ, ವೀಡಿಯೋ ಚಿತ್ರಿಸುತ್ತಿದ್ದ ಸಂಗೀತಗಾರ

Comments

Leave a Reply

Your email address will not be published. Required fields are marked *