ಸ್ವೀಡನ್‍ನಲ್ಲಿ ಯಜಮಾನ ಚಿತ್ರೀಕರಣ ವೇಳೆ ದರ್ಶನ್‍ಗೆ ಕಿಡಿಗೇಡಿಗಳ ಕಾಟ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸ್ವೀಡನ್‍ನಲ್ಲಿ ‘ಯಜಮಾನ’ ಚಿತ್ರದ ಶೂಟಿಂಗ್ ನಡೆಸುವಾಗ ಕಿಡಿಗೇಡಿಗಳು ಅವರಿಗೆ ಕಾಟ ನೀಡಿದ್ದಾರೆ.

ಸ್ವೀಡನ್‍ನಲ್ಲಿ ದರ್ಶನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಯಜಮಾನ ಚಿತ್ರದ ಹಾಡಿನ ಶೂಟಿಂಗ್ ನಡೆಸುತ್ತಿದ್ದರು. ಈ ಹಾಡಿನಲ್ಲಿ ದರ್ಶನ್ ಹಾಗೂ ರಶ್ಮಿಕಾ ಅವರು ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡುತ್ತಿರುವುದನ್ನು ಕಿಡಿಗೇಡಿಗಳು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಯಜಮಾನ ಚಿತ್ರದ ಹಾಡಿನ ಶೂಟಿಂಗ್ ನಡೆಯುತ್ತಿದ್ದಾಗ ಜೂನಿಯರ್ ಕಲಾವಿದರೊಬ್ಬರು ತಮ್ಮ ಮೊಬೈಲ್‍ನಲ್ಲಿ ಚಿತ್ರೀಕರಣವನ್ನು ಸೆರೆ ಹಿಡಿಯುತ್ತಿದ್ದರು. ಈ ವೇಳೆ ದರ್ಶನ್ ಕಲಾವಿದನನ್ನು ಹೀಗೆ ಮಾಡುವುದು ಸರಿಯಲ್ಲ. ಈ ರೀತಿ ಮಾಡಬೇಡ ಎಂದು ಕೋಪದಿಂದ ಗದರಿಸಿದ್ದರು.

ಅಂಬರೀಶ್ ನಿಧನದ ಸುದ್ದಿ ಕೇಳಿ ದರ್ಶನ್ ಸ್ವೀಡನ್‍ನಿಂದ ಬೆಂಗಳೂರಿಗೆ ವಾಪಸ್ ಬಂದಿದ್ದರು. ದರ್ಶನ್ ಇಲ್ಲದೇ ಚಿತ್ರದ ಚಿತ್ರೀಕರಣ ಸ್ಥಗಿತಗೊಂಡಿತ್ತು. ಸದ್ಯ ದರ್ಶನ್ ಈಗ ಮತ್ತೆ ಸ್ವೀಡನ್‍ಗೆ ಪ್ರಯಾಣ ಬೆಳಸುವ ಸಾಧ್ಯತೆ ಕಡಿಮೆ ಇದ್ದು, ಬೆಂಗಳೂರಿನಲ್ಲೇ ಶೂಟಿಂಗ್ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಯಜಮಾನ ಚಿತ್ರವನ್ನು ಪಿ. ಕುಮಾರ್ ಹಾಗೂ ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ. ಬಿ. ಸುರೇಶ್ ಹಾಗೂ ಅವರ ಪತ್ನಿ ಶೈಲಜ ನಾಗ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯ ದರ್ಶನ್‍ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಕಾಣಿಸಿಕೊಳ್ಳುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *