ಬಿಜೆಪಿ ನಾಯಕರ ಆರೋಪ: ಧರ್ಮಸ್ಥಳದಲ್ಲಿ ಆಣೆ ಮಾಡಲು ಹೊರಟ ಶಾಸಕ ಕೆ.ಎಂ.ಶಿವಲಿಂಗೇಗೌಡ

ಹಾಸನ: ಬಿಜೆಪಿ ನಾಯಕರು ತಮ್ಮ ಮೇಲೆ ಮಾಡಿರುವ ಆರೋಪ ನಿರಾದಾರ ಎಂದು ದೇವರ ಮೇಲೆ ಆಣೆ ಮಾಡಲು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ತಮ್ಮ ಅಪಾರ ಬೆಂಬಲಿಗರೊಂದಿಗೆ ಇಂದು ಧರ್ಮಸ್ಥಳಕ್ಕೆ ತೆರಳಿದರು.

ಆ.8ರಂದು ಅರಸೀಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ವಿರುದ್ಧ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಎಂಎಲ್‍ಸಿ ರವಿಕುಮಾರ್, ಶಿವಲಿಂಗೇಗೌಡರನ್ನು ರಾಗಿ ಕಳ್ಳ, ಸಿಮೆಂಟ್ ಕಳ್ಳ, ಕಬ್ಬಿಣ ಕಳ್ಳ ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಯಾಗಿ ಆ.22 ರಂದು ಕೆ.ಎ.ಶಿವಲಿಂಗೇಗೌಡರು ಅರಸೀಕೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ನಾನು ಒಂದು ಕೆಜಿ ರಾಗಿ ಕಳ್ಳತನ ಮಾಡಿಲ್ಲ. ಮಾಡಿದ್ದರೆ ದಾಖಲೆ ಸಮೇತ ಸಾಬೀತು ಮಾಡಲಿ. ಇಲ್ಲ ಧರ್ಮಸ್ಥಳಕ್ಕೆ ಬನ್ನಿ ದೇವರ ಮೇಲೆ ಆಣೆ ಮಾಡೋಣಾ ಎಂದು ಸವಾಲು ಹಾಕಿದ್ದರು. ಇದನ್ನೂ ಓದಿ: ಆಕಾಶ ಏರ್ ಪ್ರಯಾಣಿಕರ ವೈಯಕ್ತಿಕ ಡೇಟಾಗೆ ಕನ್ನ – ಸಂಸ್ಥೆಯಿಂದ ಕ್ಷಮೆ

ಬಿಜೆಪಿ ನಾಯಕರು ಆಣೆ ಮಾಡಲು ಬಾರದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅರಸೀಕೆರೆಯ ಮೈಸೂರು ರಸ್ತೆಯಿಂದ ನೂರಾರು ವಾಹನದಲ್ಲಿ ತಮ್ಮ ಅಪಾರ ಬೆಂಬಲಿಗರು ಹಾಗೂ ಅಭಿಮಾನಿಗಳ ಜೊತೆ ಕೆ.ಎಂ.ಶಿವಲಿಂಗೇಗೌಡ ಧರ್ಮಸ್ಥಳಕ್ಕೆ ತೆರಳಿದರು. ಶಾಸಕರ ತಂಡ ಅರಸೀಕೆರೆ, ಬಾಣಾವರ, ಬೇಲೂರು, ಮೂಡಿಗೆರೆ ಮಾರ್ಗವಾಗಿ ಧರ್ಮಸ್ಥಳ ತಲುಪಲಿದ್ದು, ತಮ್ಮ ಮೇಲೆ ಬಿಜೆಪಿ ನಾಯಕರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ದೇವರ ಮೇಲೆ ಆಣೆ ಮಾಡಿ ವಾಪಾಸ್ಸಾಗಲಿದ್ದಾರೆ. ಇದನ್ನೂ ಓದಿ: ಮಾತಾಡ್ಲಿಲ್ಲ ಅಂತ ಕಿಟಕಿಯಿಂದ ಮಲಗಿದ್ದವಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *