ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಚಾಕು ಇರಿದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗ

ಬೆಳಗಾವಿ: ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ಮುಂದುವರೆದಿದೆ. ಸದ್ಯ ನಾಯಕರು ಸಮಾಧಾನಗೊಂಡಿದ್ದರೆ, ಬೆಂಬಲಿಗರು ಮಾತ್ರ ಶತ್ರುತ್ವವನ್ನು ಕಾರುತ್ತಿದ್ದಾರೆ.

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗ ಮಾರಿಹಾಳ ಗ್ರಾ.ಪಂ ಉಪಾಧ್ಯಕ್ಷ ತೌಸಿಫ್ ಫಣಿಬಂದ ಎಂಬಾತ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗ ಆಸೀಫ್ ಮುಲ್ಲ ಎಂಬಾತನ ಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಾಯಾಳು ಅಸೀಪ್ ಮುಲ್ಲಾನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿ ಬೆಂಬಲಿಗನ ಆರೋಗ್ಯ ವಿಚಾರಿಸಿದರು. ಘಟನೆ ಬಳಿಕ ಆರೋಪಿ ತೌಸಿಫ್ ನಾಪತ್ತೆಯಾಗಿದ್ದಾನೆ. ಪೊಲೀಸರು ಆರೋಪಿ ಬಂಧನಕ್ಕಾಗಿ ವಿಶೇಷ ಜಾಲ ಬೀಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Comments

Leave a Reply

Your email address will not be published. Required fields are marked *