ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು: ರಾಘವೇಂದ್ರ ಹಿಟ್ನಾಳ್

ಕೊಪ್ಪಳ: ಆರ್ಥಿಕ ವ್ಯವಸ್ಥೆ ಸರಿ ಹೋಗಬೇಕೆಂದರೆ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು. ಇದು ಜನರ ಕೂಗು, ಅದರ ಜೊತೆ ನಮ್ಮ ಬೆಂಬಲ ಕೂಡ ಇದೆ. ಸಿದ್ದರಾಮಯ್ಯ ಐದು ವರ್ಷದಲ್ಲಿ 15 ಲಕ್ಷ ಮನೆ ಕೊಟ್ಟಿದ್ದರು. ಆದರೆ ಬಿಜೆಪಿ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಸ್ಕೀಮ್ ಇದ್ದವು ಎಂದಿದ್ದಾರೆ.

SIDDARAMAIAH

ಸೀನಿಯರ್ ಅಂದ ಮೇಲೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಇದ್ದೆ ಇರುತ್ತದೆ. ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಮತ್ತು ಶಾಸಕರ ಅಭಿಪ್ರಾಯ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ಸರ್ಕಾರ ಬರಲು ಮಾಧ್ಯಮದವರು ಕೈ ಜೋಡಿಸಿ. ಬೆಲೆ ಏರಿಕೆ ವಿರುದ್ಧ ನೀವು ಕೈ ಜೋಡಿಸಿ. ಸಿಲಿಂಡರ್ ಬೆಲೆ ನಮಗೂ ಅಷ್ಟೇ, ನಿಮಗೂ ಅಷ್ಟೇ. ರೈತರು, ಮಹಿಳೆಯರು ಕೂಡ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅಂತ ಬಯಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೇತುವೆ ಮುಳುಗಿದರೂ ಲೆಕ್ಕಿಸದೇ ಬಸ್ ದಾಟಿಸಿದ ಚಾಲಕ

ಕೊಪ್ಪಳದಲ್ಲಿ ಸುರಿದ ಭಾರೀ ಮಳೆಯಿಂದ ರೈತರಿಗೆ ಬೆಳೆ ಹಾನಿಯಾಗಿದ್ದು, ಕೊಪ್ಪಳ ಕ್ಷೇತ್ರದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‍ನಿಂದ ಸಮಸ್ಯೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿರೇಹಳ್ಳ ಜಲಾಶಯದಿಂದ ನೀರು ಬಿಡುಗಡೆಯಾಗಿದ್ದರಿಂದ ನೀರು ಹರಿದಿದೆ. ಈಗಾಗಲೇ ನಾವು ಅಧಿಕಾರಿಗಳಿಗೆ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ತೆರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಕಳಪೆ ಆಗಿಲ್ಲ. ಆದರೆ ನೀರು ಹೋಗತ್ತದೆ ಎನ್ನುವುದಕ್ಕೆ ರೈತರು ಗೇಟ್ ತೆರೆಯಲು ಬಿಡಲ್ಲ. ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್‍ಗಳು ಜಾಮ್ ಆಗಿವೆ. ಅಧಿಕಾರಿಗಳು ಸರ್ವೆ ಕಾರ್ಯ ಮಾಡುತ್ತಿದ್ದಾರೆ. ಸರ್ಕಾರ ಕೂಡಲೇ ಸರ್ಕಾರ ಪರಿಹಾರ ಕೊಡಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮಂಗಳಮುಖಿಯರು ಹೊಡೆದಾಡಿದ್ರೆ ಯಾರನ್ನ ಕಳುಹಿಸಲಿ: ಸಿಎಂ ಇಬ್ರಾಹಿಂ

Comments

Leave a Reply

Your email address will not be published. Required fields are marked *