ಎಂಎಲ್‍ಎ ಮಗನಿಗೆ ಮದುವೆ ಸಂಭ್ರಮ -ಸಂಚಾರ ದಟ್ಟಣೆಯಲ್ಲಿ ಒದ್ದಾಡಿ ಹೋದ ಜನ

ಬೆಂಗಳೂರು: ಯಲಹಂಕದ ಬಿಜೆಪಿ ಶಾಸಕ ವಿಶ್ವನಾಥ್ ಮಗನ ಮದುವೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಿತು. ಆದರೆ ದೊಡ್ಡವರ ಮದುವೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.

ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಹಾಗೂ ಪಲ್ಲವಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಸಿಎಂ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಸೇರಿದಂತೆ ಸಾಕಷ್ಟು ಶಾಸಕರು, ಸಂಸದರು ಮತ್ತು ಗಣ್ಯರು ಮದುವೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ವಿಐಪಿಗಳ ಸುಗಮ ಸಂಚಾರಕ್ಕಾಗಿ ಸಾಮಾನ್ಯರ ಜನರ ವಾಹನಗಳನ್ನು ಪೊಲೀಸರು ತಡೆದು ನಿಲ್ಲಿಸಿದ್ದರು. ಇದರಿಂದಾಗಿ ಪ್ಯಾಲೇಸ್ ಗ್ರೌಂಡ್ ಸುತ್ತಮುತ್ತ ಸಿಕ್ಕಾಪಟ್ಟೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗಂಟೆಗಟ್ಟಲೇ ನಿಂತರೂ ಟ್ರಾಫಿಕ್ ಕರಗಲೇ ಇಲ್ಲ. ಇದರಿಂದಾಗಿ ವಾಹನ ಸವಾರರು ಹಿಡಿಶಾಪ ಹಾಕಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *