ನೀನು ಗಂಡಸಾಗಿದ್ರೆ, ಮೊಳಕಾಲ್ಮೂರಲ್ಲಿ ಗೆದ್ದು ತೋರ್ಸು ನಾನು ನೋಡ್ತಿನಿ-ಶ್ರೀರಾಮುಲುಗೆ ಸವಾಲೆಸೆದ ಶಾಸಕ ತಿಪ್ಪೇಸ್ವಾಮಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಶಾಸಕ ತಿಪ್ಪೇಸ್ವಾಮಿ ಅವರು ಸಂಸದ ಶ್ರೀರಾಮುಲು ಅವರ ಸವಾಲಿಗೆ ಪ್ರತಿ ಸವಾಲು ಎಸೆದಿದ್ದಾರೆ.

ತನ್ನ ವಿರುದ್ಧ ಚುನಾವಣೆಯಲ್ಲಿ ನಿಂತು ಸ್ಪರ್ಧೆ ಮಾಡಿ ಗೆದ್ದು ತೋರಿಸಿ ಎಂಬ ಶ್ರೀ ರಾಮುಲು ಅವರ ಸವಾಲನ್ನು ಸ್ವೀಕರಿಸಿ ಮಾತನಾಡಿದ ಶಾಸಕ ತಿಪ್ಪೇಸ್ವಾಮಿ, ಸಂಸದರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೀನು ಗಂಡಸಾಗಿದ್ರೆ. ನಾಯಕನೇ ಆಗಿದ್ರೆ. ಇಲ್ಲಿ ಗೆದ್ದು ತೋರಿಸು ನಿಮ್ಮಂತವರಿಗೆ ಇಲ್ಲಿನ ಜನರು ಹೆದರುವುದಿಲ್ಲ. ಇದು ಮದಕರಿನಾಯಕ ಕಟ್ಟಿದ ಜಿಲ್ಲೆ ಎಂದು ಕಟು ಶಬ್ಧಗಳಲ್ಲಿ ಪ್ರತಿ ಸವಾಲು ಹಾಕಿದರು.

ಮೊಳಕಾಲ್ಮೂರು ಕ್ಷೇತ್ರದ ಸ್ವ-ಗ್ರಾಮದಲ್ಲಿ ಬೆಂಬಲಿಗರ ಸಭೆ ಬಳಿಕ ಮಾತನಾಡಿದ ತಿಪ್ಪೇಸ್ವಾಮಿ, ಶತಾಯಗತಾಯ ಶ್ರೀರಾಮುಲು ಅವರಿಗೆ ಈ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸುತ್ತೇನೆ. ಪಕ್ಷದಲ್ಲಿ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ. ನಾನು ಯಾವ ಪಕ್ಷದವರನ್ನೂ ಟಿಕೆಟ್ ಗಾಗಿ ಸಂಪರ್ಕಿಸಿಲ್ಲ ಎಂದರು.

ಬಳ್ಳಾರಿಯಲ್ಲಿ ಸೋಲಿನ ಭೀತಿಯಿಂದ ಶ್ರೀರಾಮುಲು ವರು ಚಿತ್ರದುರ್ಗಕ್ಕೆ ಬಂದಿದ್ದಾರೆ. ಅಲ್ಲದೇ ತನಗೆ ಟಿಕೆಟ್ ನೀಡುವ ಭರವಸೆ ನೀಡಿ ಮೋಸ ಮಾಡಿದ್ದಾರೆ. ಬಿಜೆಪಿ ಮೋಸ ಮಾಡಿದ ಪಕ್ಷ, ಬಿಜೆಪಿಗೆ ಮತ ಹಾಕಬೇಡಿ. ಅಲ್ಲದೇ ನಾಗೇಂದ್ರ, ಆನಂದ್ ಸಿಂಗ್ ಅವರೆಲ್ಲ ಶ್ರೀರಾಮುಲು ಅವರನ್ನು ಯಾಕೆ ಬಿಟ್ಟು ಹೋದರು ನನಗೆ ತಿಳಿದಿದೆ. ಆದರೆ ಅವರು ಇಲ್ಲಿನ ಕೆಲ ಸ್ಥಳೀಯರ ಮಾತು ಕೇಳಿದ್ದಾರೆ. ಅಂಥವರ ಮಾತಿನಿಂದ ಎಲ್ಲರೂ ಹಾಳಾಗಬೇಕಾಗುತ್ತದೆ. ಪದೇ ಪದೇ ಸೋಲು ಖಚಿತ ಎಂದು ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ರಾಮುಲು ಅವರು ಹೇಳುತ್ತಾರೆ ಆದ್ರೆ ಅವರದ್ದು, ಮಾತು ಕೊಟ್ಟು ಮೋಸ ಮಾಡಿದ ರಕ್ತ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಕ್ಷೇತ್ರದ ಜನತೆ ನನ್ನೊಂದಿಗೆ ಇದ್ದಾರೆ, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಎಲ್ಲಾ ಸಮುದಾಯದವರೂ ನನ್ನ ಜೊತೆಗಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನನ್ನ ಕುಟುಂಬಕ್ಕೆ ಅನ್ಯಾಯ ಮಾಡಿದೆ ಎಂದು ತಮ್ಮ ಸಹೋದರನ ಹೆಸರು ಹೇಳದೆ ಶ್ರೀರಾಮುಲು ವಿರುದ್ಧ ಕೆಂಡಾಮಂಡಲರಾದ್ರು.  ಇದನ್ನೂ ಓದಿ:   ಶಾಸಕ ತಿಪ್ಪೇಸ್ವಾಮಿಗೆ ಬಹಿರಂಗ ಸವಾಲೆಸೆದ ಶ್ರೀರಾಮುಲು

 

 

Comments

Leave a Reply

Your email address will not be published. Required fields are marked *