ಬೆಳ್ಳಂಬೆಳಗ್ಗೆ ಶಾಸಕರಿಂದ ಅಧಿಕಾರಿಗಳಿಗೆ ಕ್ಲಾಸ್

ಬಳ್ಳಾರಿ: ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬಳ್ಳಾರಿಯ ಗಣೇಶ್ ಕಾಲೋನಿಯಲ್ಲಿ ಒಳಚರಂಡಿ ನೀರು ನುಗ್ಗಿ ಮನೆಗಳು ಜಲಾವೃತಗೊಂಡಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳು ಮನೆಯಿಂದ ಹೊರಬಂದಿದ್ದರು. ಹೀಗಾಗಿ ಸೋಮಶೇಖರ್ ಅವರು ಮಹಾನಗರ ಪಾಲಿಕೆ ಆಯುಕ್ತೆ ತುಷಾರಾಮಣಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಜನರ ಸಮಸ್ಯೆ ಪರಿಹಾರ ಮಾಡದೇ ಇರುವ ಹಿನ್ನೆಲೆಯಲ್ಲಿ ಸೋಮಶೇಖರ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಜಲಾವೃತ ಆದ ಮನೆಯ ಕಟ್ಟೆಯ ಮೇಲೆ ಕುಳಿತು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.

ನಗರದಲ್ಲಿ ಪದೇ ಪದೇ ಯುಜಿಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಲಾಗುತ್ತಿದೆ. ಸೋಮಶೇಖರ್ ಕ್ಲಾಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಹನಗಳನ್ನು ತರಿಸಿ ಕ್ಲೀನ್ ಮಾಡಲು ಮುಂದಾಗಿದ್ದಾರೆ.

Comments

Leave a Reply

Your email address will not be published. Required fields are marked *