ಸತ್ಯದರ್ಶನ ಸಭೆ ನಡೆಸಲು ಬಿಡಲ್ಲ: ಮೋಹನ್ ಲಿಂಬಿಕಾಯಿ

ಹುಬ್ಬಳ್ಳಿ: ಮೂರುಸಾವಿರ ಮಠದ ಉತ್ತರಾಧಿಕಾರಿ ವಿಚಾರಕ್ಕೆ ಸಂಬಂಧಿಸಿದಂತೆ ಫೆ. 23ರಂದು ಸತ್ಯದರ್ಶನ ಸಭೆ ನಡೆಸಲು ವಿರೋಧ ವ್ಯಕ್ತವಾಗುತ್ತಿದ್ದು, ಮೂರುಸಾವಿರ ಮಠದ ಉನ್ನತಾಧಿಕಾರ ಸಮಿತಿ ಸದಸ್ಯರೂ ಆಗಿರುವ ಮೋಹನ್ ಲಿಂಬಿಕಾಯಿ ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಈ ಕುರಿತು ಪ್ರತಿಕ್ರಿಯಸಿದ ಅವರು, ಮೂರು ಸಾವಿರ ಮಠದ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಯಾರೋ ಬಂದು ಸಭೆ ನಡೆಸುತ್ತೇವೆ ಅಂದರೆ ಅವಕಾಶ ಕೊಡುವುದಿಲ್ಲ. ಫೆ.23ರಂದು ಸತ್ಯದರ್ಶನ ಸಭೆ ನಡೆಸಲು ಬಿಡುವುದಿಲ್ಲ ಎಂದು ಮೋಹನ್ ಲಿಂಬಿಕಾಯಿ ಹೇಳಿದ್ದಾರೆ.

ಹುಬ್ಬಳ್ಳಿಯ ಮೂರು ಸಾವಿರ ಮಠದ ಉತ್ತರಾಧಿಕಾರಿಯನ್ನಾಗಿ ತಮ್ಮನ್ನೇ ನೇಮಕ ಮಾಡಬೇಕೆಂಬುದರ ಕುರಿತು ಬಾಲೇಹೊಸುರಿನ ದಿಂಗಾಲೇಶ್ವರ ಸ್ವಾಮೀಜಿ ಇದೇ ಭಾನುವಾರ ಮಠದ ಆವರಣದಲ್ಲಿ ಸತ್ಯ ದರ್ಶನ ಸಭೆ ಕರೆದಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದು, ಸಭೆ ನಡೆಸಲು ಅವಕಾಶ ನೀಡುವುದಿಲ್ಲವೆಂದು ಹಲವರು ಪಟ್ಟು ಹಿಡಿದಿದ್ದಾರೆ. ಇದೀಗ ಮೋಹನ್ ಲಿಂಬಿಕಾಯಿಯವರು ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಹಾಲಿ ಪೀಠಾಧ್ಯಕ್ಷ ಮೂಜಗು ಸ್ವಾಮೀಜಿ ಮಠವನ್ನು ನಡೆಸಲು ಸಮರ್ಥರಿದ್ದಾರೆ. ಯಾರೋ 52 ಜನ ಸಹಿ ಹಾಕಿದ ತಕ್ಷಣ ಉತ್ತರಾಧಿಕಾರಿ ನೇಮಕ ಆಗುವುದಿಲ್ಲ. ಸರ್ವಾಧಿಕಾರಿಯಂತೆ ಉತ್ತರಾಧಿಕಾರಿ ನೇಮಕ ನಡೆಯುವುದಿಲ್ಲ ಎಂದು ಮೋಹನ್ ಲಿಂಬಿಕಾಯಿ ಸ್ಪಷ್ಟಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *