ಮೇ 30ರ ಒಳಗಡೆ ರಾಜ್ಯಕ್ಕೆ ಮುಂಗಾರು ಪ್ರವೇಶ

ಬೆಂಗಳೂರು: ಮೇ ಅಂತ್ಯಕ್ಕೆ ದೇಶಕ್ಕೆ ಮುಂಗಾರು ಮಳೆ ಪ್ರವೇಶವಾಗಲಿದ್ದು, ರಾಜ್ಯಕ್ಕೆ ಮೇ 30ರೊಳಗೆ ಮುಂಗಾರು ಪ್ರವೇಶ ಮಾಡಲಿದೆ.

ಮೇ 28 ರಿಂದ 30 ರೊಳಗೆ ಕೇರಳ ಮೂಲಕ ದೇಶಕ್ಕೆ ಮುಂಗಾರು ಪ್ರವೇಶ ಮಾಡಲಿದೆ. ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುತ್ತಿದ್ದ ಹಾಗೇ ರಾಜ್ಯಕ್ಕೂ ಮುಂಗಾರು ಪ್ರವೇಶ ಆಗಲಿದೆ ಎಂದು ಪಬ್ಲಿಕ್ ಟಿವಿಗೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಯೋಜನಾ ವಿಜ್ಞಾನಿ ಗವಾಸ್ಕರ್ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ರಾಜ್ಯಕ್ಕೆ ಮುಂಗಾರು ಜೂನ್ 9 ರಂದು ರಾಜ್ಯಕ್ಕೆ ಪ್ರವೇಶ ಮಾಡಿತ್ತು.ಭಾರತೀಯ ಹವಾಮಾನ ಇಲಾಖೆಯ ಪ್ರಕಾರ 30 ಕ್ಕೆ ಮುಂಗಾರು ಪ್ರವೇಶ ಮಾಡಲಿದೆ ಅಂತ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಅವರು ತಿಳಿಸಿದರು.

ಕರ್ನಾಟಕಕ್ಕ ಈ ಹಿಂದಿನ ವರ್ಷದಲ್ಲಿ ಯಾವಾಗ ಮುಗಾರು ಪ್ರವೇಶಿಸಿತ್ತು?
2012 – 5 ಜೂನ್
2013 – 1 ಜೂನ್
2014 – 6 ಜೂನ್
2015 – 5 ಜೂನ್
2016 – 8 ಜೂನ್

 

Comments

Leave a Reply

Your email address will not be published. Required fields are marked *