ಮಲೆ ಮಹದೇಶ್ವರ ದೇಗುಲದ ಹುಂಡಿ ಎಣಿಕೆ- 1 ಕೋಟಿಗೂ ಅಧಿಕ ನಗದು ಸಂಗ್ರಹ

ಚಾಮರಾಜನಗರ: ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವಾಲಯದಲ್ಲಿ ಗುರುವಾರದಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ ಬರೋಬ್ಬರಿ 1 ಕೋಟಿಗೂ ಅಧಿಕ ನಗದು ಸಂಗ್ರಹವಾಗಿದೆ.

ಕರ್ನಾಟಕದಲ್ಲಿ ಅತೀ ಹೆಚ್ಚು ಆದಾಯ ತಂದುಕೊಡುವ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ದೇವಾಲಯವಿದೆ. ಗುರುವಾರ ದೇಗುಲದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಕಳೆದ ತಿಂಗಳ ಹುಂಡಿ ಎಣಿಕೆ ಕಾರ್ಯ ಗುರುವಾರ ತಡ ರಾತ್ರಿ ಮುಗಿದಿದ್ದು, ಬರೋಬ್ಬರಿ 1,25,50,612 ರೂಪಾಯಿ ನಗದು ಈ ಬಾರಿ ಸಂಗ್ರಹವಾಗಿದೆ.

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಆನಂದ್ ಮತ್ತು ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಸಮ್ಮುಖದಲ್ಲಿ ನೂರಾರು ಸಿಬ್ಬಂದಿ ಹುಂಡಿ ಕಾರ್ಯ ನಡೆಸಿದರು. ಪ್ರತಿ ತಿಂಗಳಿಗೊಮ್ಮೆ ಹುಂಡಿ ಎಣಿಕೆ ಕಾರ್ಯ ನಡೆಸಲಾಗುತ್ತದೆ. ಹುಂಡಿ ಎಣಿಕೆ ಕಾರ್ಯದಲ್ಲಿ ಹಣದ ಜೊತೆಗೆ 28 ಗ್ರಾಂ ಚಿನ್ನ, 1 ಕೆಜಿ 300 ಗ್ರಾಂ ಬೆಳ್ಳಿ ಸಿಕ್ಕಿದೆ.

Comments

Leave a Reply

Your email address will not be published. Required fields are marked *