ಬಿಸಿಯೂಟ ಸೇವಿಸಿ ತುಮಕೂರಿನ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ತುಮಕೂರು: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆ ತುರುವೆಕೆರೆ ತಾಲೂಕಿನ ತುಯ್ಯಾಳೆ ಪಾಳ್ಯದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ತುಯ್ಯಾಳೆ ಪಾಳ್ಯದ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೇ ಬಿಸಿಯೂಟ ತಯಾರಿಸಲಾಗುತ್ತಿದ್ದು, ಇಂದು ಮಧ್ಯಾಹ್ನದ ವಿದ್ಯಾರ್ಥಿಗಳಿಗೆ ಅನ್ನ ಸಾಂಬಾರ್ ಬಡಿಸಲಾಗಿತ್ತು. ಊಟ ಮಾಡಿ ಮತ್ತೆ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು. ಕೆಲ ಹೊತ್ತಿನ ನಂತರ ವಿವಿಧ ತರಗತಿಯಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಕಾಣಿಸಿಕೊಂಡಿದ್ದು ಅಸ್ವಸ್ಥಗೊಂಡಿದ್ದಾರೆ.

ವಿದ್ಯಾರ್ಥಿಗಳನ್ನು ಗ್ರಾಮಸ್ಥರು ಹಾಗೂ ಶಿಕ್ಷಕರು ಆಟೋ ಹಾಗೂ ವಿವಿಧ ವಾಹನದಲ್ಲಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ಮಕ್ಕಳು ಚೇತರಿಸಿಕೊಂಡಿದ್ದಾರೆ. ಕೆಟ್ಟಿದ್ದ ತರಕಾರಿಯನ್ನು ಅಡುಗೆಗೆ ಬಳಸಿದ್ದರಿಂದ ಈ ಘಟನೆ ಸಂಭವಿಸಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಆಹಾರವನ್ನು ಯಾವುದೇ ಶಿಕ್ಷಕರು ಸೇವನೆ ಮಾಡಿರಲಿಲ್ಲ ಎಂದು ಮಾಹಿತಿ ಸಿಕ್ಕಿದೆ.

Comments

Leave a Reply

Your email address will not be published. Required fields are marked *