ಮದುವೆ ಆರತಕ್ಷತೆ ಊಟ ಸೇವಿಸಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಕೋಲಾರ: ಮದುವೆ ಆರತಕ್ಷತೆ ಊಟ ಸೇವಿಸಿದ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೋಲಾರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕೋಲಾರದ ನುಕ್ಕನಹಳ್ಳಿ ಗ್ರಾಮದ ದಿವ್ಯ ಹಾಗೂ ಮುರಳಿ ಎಂಬವರ ಮದುವೆ ಇದೇ ಶನಿವಾರ-ಭಾನುವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ವೇಮಾರನಹಳ್ಳಿಯ ವರನ ಸ್ವಗ್ರಾಮದಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ದಿವ್ಯಾ ಅವರ ಸ್ವಗ್ರಾಮ ನುಕ್ಕನಹಳ್ಳಿಯಲ್ಲಿ ಭಾನುವಾರ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಅರತಕ್ಷತೆ ಊಟ ತಿಂದ ನುಕ್ಕನಹಳ್ಳಿಯ 50 ಕ್ಕೂ ಹೆಚ್ಚು ಗ್ರಾಮಸ್ಥರಿಗೆ ವಾಂತಿ, ಬೇಧಿಯಾಗಿದ್ದು ಕಳೆದ ಎರಡು ದಿನಗಳಿಂದ ಅಸ್ವಸ್ಥರಾಗಿ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮೊದಲಿಗೆ ವಾಂತಿ, ಬೇಧಿಯಾಗಿ ಅಸ್ವಸ್ಥರಾಗಿರುವ 50ಕ್ಕೂ ಹೆಚ್ಚು ಜನರಲ್ಲಿ 10 ಕ್ಕೂ ಹೆಚ್ಚು  ಜನರ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿರುವವರನ್ನ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಅಸ್ವಸ್ಥ ಗ್ರಾಮಸ್ಥರಿಗೆ ಗ್ರಾಮದ ಶಾಲೆಯೊಂದರಲ್ಲಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ಥಳದಲ್ಲೇ ಬೀಡುಬಿಟ್ಟಿರುವ ವೈದ್ಯರು ದೃಢಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *