ರಾತ್ರೋರಾತ್ರಿ ಕಿಡಿಗೇಡಿಗಳಿಂದ 500ಕ್ಕೂ ಹೆಚ್ಚು ಅಡಿಕೆ ಗಿಡಗಳು ನಾಶ

ದಾವಣಗೆರೆ: ರಾತ್ರೋರಾತ್ರಿ ಕಿಡಿಗೇಡಿಗಳು 500ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮರುಳಸಿದ್ದಪ್ಪ ಎಂಬವರಿಗೆ ಸೇರಿದ ಅಡಿಕೆ ಮರಗಳಾಗಿದ್ದು, ಭಾನುವಾರ ಮರುಳ ಸಿದ್ದಪ್ಪ ಸಂಬಂಧಿಕರ ಮದುವೆಗೆಂದು ಹೋಗಿದ್ದರು. ಮದುವೆ ಮುಗಿಸಿ ಇಂದು ಬೆಳಗ್ಗೆ ಬಂದು ಅಡಿಕೆ ಮರಗಳನ್ನು ನೋಡಿ ಆಕಾಶವೇ ಕಳಚಿ ಬಿದ್ದಂತಾಗಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಕಷ್ಟ ಪಟ್ಟು ಸಾಕಿದ್ದ ಅಡಿಕೆ ಮರಗಳು ನೆಲಸಮವಾಗಿದೆ. ವೈಯಕ್ತಿಕ ದ್ವೇಷದಿಂದ ಅಡಿಕೆ ಮರಗಳನ್ನು ಕಡಿದಿದ್ದಾರೆ. ಇಂತಹ ಕೆಲಸ ಮಾಡಿದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಸಾಗರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *