ವೀಡಿಯೋ: ಧಗಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ಬೆಂಗಳೂರು: ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದ್ದು ಚಾಲಕ ಸೇರಿದಂತೆ ಮೂವರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ.

ತುಮಕೂರು ಜಿಲ್ಲೆ ತುರುವೇಕೆರೆಯಿಂದ ಬೆಂಗಳೂರಿಗೆ ಸ್ಕಾರ್ಪಿಯೋ ಕಾರು ಬರುತ್ತಿತ್ತು. ಬೆಂಗಳೂರಿನ ರಾಮಕೃಷ್ಣ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಆಕಸ್ಮಿಕವಾಗಿ ಇಂಜಿನ್‍ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕಾರು ಸಂಪೂರ್ಣ ಭಸ್ಮವಾಗಿದೆ.

ಈ ಘಟನೆಯಿಂದ ಕೆಲಕಾಲ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಿದ್ದಾರೆ. ಘಟನಾ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

https://www.youtube.com/watch?v=M9MleBzq1lY

 

Comments

Leave a Reply

Your email address will not be published. Required fields are marked *