ರೇಣುಕಾಚಾರ್ಯ ವಿರುದ್ಧ ಮುಸ್ಲಿಂ ಸಂಘಟನೆ ಪ್ರತಿಭಟನೆ

ಶಿವಮೊಗ್ಗ : ಶಾಸಕ ಎಂ.ಪಿ.ರೇಣುಕಾಚಾರ್ಯ ಮಸೀದಿ ಹಾಗೂ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಿಟಿಜನ್ ಯುನೈಟೆಡ್ ಮೂಮೆಂಟ್ ನ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಮಹಾವೀರ ವೃತ್ತದಲ್ಲಿ ರೇಣುಕಾಚಾರ್ಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರೇಣುಕಾಚಾರ್ಯ ಅವರು ಮಸೀದಿಗಳು ಶಸ್ತ್ರಾಸ್ತ್ರ ಸಂಗ್ರಹಣಾ ಕೇಂದ್ರಗಳಾಗಿವೆ ಎಂದು ಹೇಳಿಕೆ ನೀಡುವ ಮೂಲಕ ಒಂದು ಕೋಮಿನ ವಿರುದ್ಧ ಇನ್ನೊಂದು ಕೋಮನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಕೂಡಲೇ ಶಾಸಕ ರೇಣುಕಾಚಾರ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Comments

Leave a Reply

Your email address will not be published. Required fields are marked *