ಸಂಸದೆ ಸುಮಲತಾ ಕಾಂಗ್ರೆಸ್‌ಗೆ ಬರಬಹುದು – ಸಚಿವ ಬೋಸರಾಜು ಹೊಸ ಬಾಂಬ್‌

ರಾಯಚೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ (BJP-JDS Alliance) ಚುನಾವಣಾ ಪೂರ್ವ ಮೈತ್ರಿ ಹಿನ್ನೆಲೆ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ ಅನ್ನೋ ಚರ್ಚೆ ಶುರುವಾಗಿದೆ. ಈ ಬೆನ್ನಲ್ಲೇ ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು ಸುಮಲತಾ (Sumalatha Ambareesh) ಕಾಂಗ್ರೆಸ್‌ ಪಕ್ಷಕ್ಕೆ ಬರಬಹುದು, ಈಗಲೇ ಏನೂ ಹೇಳೋದಕ್ಕೆ ಸಾಧ್ಯವಿಲ್ಲ ಅಂತ ಹೇಳಿದ್ದಾರೆ.

ರಾಯಚೂರಿನಲ್ಲಿ (Raichur) ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ರಮ್ಯಾ (ನಟಿ/ಮಾಜಿ ಸಂಸದೆ) (Ramya) ಬೇಕಂತಿಲ್ಲ, ಇಬ್ಬರು ಮೂವರು ಅಭ್ಯರ್ಥಿ ರೆಡಿ ಇದ್ದಾರೆ. ಸರ್ವೆ ನಡೆಯುತ್ತಿದೆ, ಜನರ ಅಭಿಪ್ರಾಯದ ಮೇಲೆ ಅಭ್ಯರ್ಥಿ ಅಂತಿಮವಾಗುತ್ತೆ. ಸುಮಲತಾ ಪಕ್ಷಕ್ಕೆ ಬಂದರೂ ಬರಬಹುದು. ತುಂಬಾ ಪವರಫುಲ್ ಕ್ಯಾಂಡಿಡೇಟ್ಸ್ ಪೈಪೋಟಿಯಲ್ಲಿದ್ದಾರೆ. 100% ಗೆಲ್ಲುವಂತ ಅಭ್ಯರ್ಥಿ ಮಂಡ್ಯದಲ್ಲಿ ಇದ್ದಾರೆ. ಯಾರು ಸೂಕ್ತ ಅನ್ನೋದನ್ನ ಮುಂದೆ ಹೈಕಮಾಂಡ್‌ ತೀರ್ಮಾನ ಮಾಡುತ್ತೆ ಎಂದು ತಿಳಿಸಿದ್ದಾರೆ.

ಇನ್ನೂ ಖಾಸಗಿ ವಾಹನ ಮಾಲೀಕರ ಹೋರಾಟ ಕುರಿತು ಪ್ರತಿಕ್ರಿಯಿಸಿದ ಎನ್.ಎಸ್.ಬೋಸರಾಜು, ಖಾಸಗಿ ವಾಹನಗಳ ಮಾಲೀಕರು ಅವರ ಲಾಭಕ್ಕೆ ಹೋರಾಟ ಮಾಡುತ್ತಿದ್ದಾರೆ. ಶಕ್ತಿಯೋಜನೆ ಬಗ್ಗೆ ಅವರಿಗೆ ವಿರೋಧ, ಅಸಮಧಾನವಿಲ್ಲ. ಅವರ ಬಸ್‌ಗಳಿಗೆ ಯೋಜನೆ ಕೊಟ್ಟಿಲ್ಲ, ಅವರ ವ್ಯವಹಾರ ಕಡಿಮೆಯಾಗುತ್ತೆ ಅಂತ ಹೋರಾಟ ಮಾಡ್ತಿದ್ದಾರೆ. ಸಾಧಕ-ಬಾಧಕಗಳನ್ನ ನೋಡಿ ಸರ್ಕಾರ ತೀರ್ಮಾನ ಮಾಡುತ್ತದೆ. ಅವರಿಗೆ ತೊಂದರೆ ಕೊಡಬೇಕು ಅನ್ನೋದು ಸರ್ಕಾರದ ಉದ್ದೇಶವಲ್ಲ ಎಂದಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಹೊರಗಿನವರು ನಮ್ಮವರೂ ಮೋಸ ಮಾಡ್ತಾರೆ, ಅನುಭವವಿದೆ: ಪರಮೇಶ್ವರ್

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳು ಹೆಚ್ಚಾಗಿ ಓಡಾಡುತ್ತವೆ. ಅವರಿಗೆ ಯಾವ ರೀತಿ ಅನುಕೂಲ ಮಾಡಬೇಕು ಅನ್ನೋದನ್ನ ಸರ್ಕಾರ ತೀರ್ಮಾನ ಮಾಡುತ್ತೆ. ರಾಜ್ಯ ಮಾತ್ರವಲ್ಲ ಇಡೀ ದೇಶದಲ್ಲಿ ಶಕ್ತಿ ಯೊಜನೆ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ. ಮಧ್ಯವರ್ತಿಗಳಿಗೆ ಒಂದು ಪೈಸೆ ಸಿಗದಂತೆ 5 ಗ್ಯಾರೆಂಟಿಗಳನ್ನ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]