ಹೊಂಬಾಳೆ ಫಿಲ್ಮಸ್ ಬಘೀರನಿಗೆ ಮೇ 20ಕ್ಕೆ ಮುಹೂರ್ತ – ಶ್ರೀಮುರುಳಿ ನಾಯಕ

ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಅಡಿಯಲ್ಲಿ ಈಗಾಗಲೇ ಘೋಷಣೆ ಆಗಿರುವ ಶ್ರೀಮುರುಳಿ ನಟನೆಯ ʼಬಘೀರʼ ಚಿತ್ರಕ್ಕೆ ಮೇ 20ರಂದು ಸಿಂಪಲ್ ಆಗಿ ಮುಹೂರ್ತ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಯಶ್ ನಟನೆಯ ‘ಲಕ್ಕಿ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಡಾ.ಸೂರಿ, ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಪ್ರಶಾಂತ್ ನೀಲ್ ಅವರು ಕಥೆ ಬರೆದಿದ್ದಾರೆ. ಇದನ್ನೂ ಓದಿ : ಮನೆಗೆ ಕರೆಯಿಸಿಕೊಳ್ಳುವಂಥ ಅರ್ಹತೆ ಬಾಲಿವುಡ್ ನಲ್ಲಿ ಯಾರಿಗೂ ಇಲ್ಲ : ಕಂಗನಾ ರಣಾವತ್

ಈಗಾಗಲೇ ಹೊಂಬಾಳೆ ಫಿಲ್ಮ್ಸ್ ಹಲವು ಚಿತ್ರಗಳನ್ನು ಘೋಷಣೆ ಮಾಡಿದೆ. ಸಂತೋಷ್ ಆನಂದ್ ರಾಮ್ ಜಗ್ಗೇಶ್‌ಗಾಗಿ ಒಂದು ಸಿನಿಮಾವನ್ನು ನಿರ್ದೇಶನ ಮಾಡಿದ್ದರೆ, ರಿಷಭ್ ಶೆಟ್ಟಿ ಕೂಡ ಮತ್ತೊಂದು ಚಿತ್ರಕ್ಕೆ ನಿರ್ದೇಶಕರಾಗಿದ್ದಾರೆ. ರಕ್ಷಿತ್ ಶೆಟ್ಟಿ ಕೂಡ ಒಂದು ಚಿತ್ರವನ್ನು ನಿರ್ದೇಶನ ಮಾಡಬೇಕಿದೆ. ಈ ಸಿನಿಮಾಗೂ ಮುನ್ನ ಬಘೀರ ಸಿನಿಮಾ ಸೆಟ್ಟೇರುತ್ತಿದೆ. ಇದನ್ನೂ ಓದಿ : ಕಾನ್ ಫೆಸ್ಟಿವಲ್‌ನಲ್ಲಿ ತಾರೆಯರ ದಂಡು

ಇದು ಹೊಂಬಾಳೆ ಬ್ಯಾನರ್‌ನಲ್ಲಿ ಮೂಡಿ ಬರುತ್ತಿರುವ ಎಂಟನೇ ಸಿನಿಮಾ. ಇದು ಪಕ್ಕಾ ಮಾಸ್ ಸಿನಿಮಾವಾಗಿದ್ದು, ವಿಭಿನ್ನ ಶೀರ್ಷಿಕೆಯಿಂದಾಗಿಯೇ ಕುತೂಹಲ ಮೂಡಿಸಿದೆ. ಈ ಚಿತ್ರಕ್ಕೆ ಶ್ರೀಮುರುಳಿ ಕೂಡ ಸಖತ್ ತಯಾರಿ ಆಗಿದ್ದಾರಂತೆ. ಎಂದಿನಂತೆ ಪ್ರಶಾಂತ್ ನೀಲ್ ಆಶಯದಂತೆಯೇ ಈ ಸಿನಿಮಾ ಮೂಡಿ ಬರುತ್ತಿರುವುದು ಮತ್ತೊಂದು ವಿಶೇಷ. ಇದನ್ನೂ ಓದಿ : ಇಂಡಸ್ಟ್ರಿಯಲ್ಲಿ ನಟಿಯರು ಎದುರಿಸುವ ಸವಾಲು ಬಿಚ್ಚಿಟ್ಟ ರಮ್ಯಾ

ಈಗಾಗಲೇ ಲಕ್ಕಿ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಡಾ.ಸೂರಿ, ನಾಲ್ಕು ವರ್ಷಗಳಿಂದ ಯಾವುದೇ ಚಿತ್ರ ಮಾಡಿರಲಿಲ್ಲ. ಬಘೀರ ಮೂಲಕ ಮತ್ತೆ ಕಮ್ ಬ್ಯಾಕ್ ಆಗುತ್ತಿದ್ದಾರೆ. ಈಗಾಗಲೇ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ಶ್ರೀಮುರುಳಿ ಹುಟ್ಟು ಹಬ್ಬದಂದು ವಿಶೇಷ ಪೋಸ್ಟರ್ ಮತ್ತು ಟೈಟಲ್ ರಿಲೀಸ್ ಮಾಡಲಾಗಿದೆ.

Comments

Leave a Reply

Your email address will not be published. Required fields are marked *