ಸದ್ಗುರುವಿನೊಂದಿಗೆ ‘ಮುಂದಿನ ನಿಲ್ದಾಣ’ ತಂಡ

ಬೆಂಗಳೂರು: ತೆರೆ ಕಾಣುವ ಮುನ್ನವೇ ಯುವ ನಿರ್ದೇಶಕ ವಿನಯ್ ಭಾರದ್ವಾಜ್ ಅವರ ಮುಂದಿನ ನಿಲ್ದಾಣ ಚಿತ್ರವು ಎಲ್ಲೆಡೆಯೂ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡುತ್ತಲೇ ಇದೆ. ಮೊನ್ನೆಯಷ್ಟೇ ರಿಲೀಸ್ ಆದ ಈ ಚಿತ್ರದ ಮನಸೇ ಮಾಯ ಹಾಡು ಯೂಟ್ಯೂಬ್, ಟಿಕ್ ಟಾಕ್ ಗಳಲ್ಲಿ ವೈರಲ್ ಆಗಿದ್ದು ದಿನದಿಂದ ದಿನಕ್ಕೆ ಅದರ ಕಾವು ಏರುತ್ತಾ ಇದೆ. ಇದರ ಜೊತೆಯಲ್ಲಿಯೇ, ಕಾವೇರಿ ತಾಯಿಯ ಒಡಲಿನ ಕಾವನ್ನು ತಗ್ಗಿಸುವ ಪ್ರಯತ್ನಕ್ಕೂ ಚಿತ್ರ ತಂಡವು ಕೈಜೋಡಿಸಿದೆ!

ಚಿತ್ರದ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿರುವ ರಾಧಿಕಾ ನಾರಾಯಣ್, ಪ್ರವೀಣ್ ತೇಜ್ ಹಾಗೂ ಅನನ್ಯಾ ಕಶ್ಯಪ್ ಅವರನ್ನೊಳಗೊಂಡ ತಂಡವು ಕಾವೇರಿ ಕೂಗು ಅಭಿಯಾನ ಮಾಡುತ್ತಿರುವ ಈಶಾ ಫೌಂಡೇಶನ್‍ನ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿ ಮಾಡಿತು.

ಮುಂದಿನ ನಿಲ್ದಾಣ ಚಿತ್ರ ತಂಡವು ಸದಾ ಕಾವೇರಿಯ ಹಾಗೂ ಕನ್ನಡದ ನೆಲ, ಜಲ ಹಾಗೂ ಭಾಷೆಯ ಉಳಿವಿಗೆ ಬದ್ಧವಾಗಿದೆ ಎಂಬ ಮಾತನ್ನು ಸದ್ಗುರುವಿನ ಜೊತೆ ಹಂಚಿಕೊಳ್ಳುತ್ತಾ, ಚಿತ್ರ ತಂಡವು ಬೆಂಗಳೂರಿಗೆ ಮರಳಿತು.

Comments

Leave a Reply

Your email address will not be published. Required fields are marked *