ನಂಜುಡೇಶ್ವರ ದರ್ಶನ ಪಡೆದ ನಾದಬ್ರಹ್ಮ ಹಂಸಲೇಖ

ಚಾಮರಾಜನಗರ/ಮೈಸೂರು: ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅವರು ಮೈಸೂರು ಜಿಲ್ಲೆಯ ನಂಜನಗೂಡಿನ ನಂಜುಡೇಶ್ವರನ ದೇವಾಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ.

ಶುಕ್ರವಾರ ಕೇತುಗ್ರಸ್ಥ ಚಂದ್ರ ಗ್ರಹಣದ ಹಿನ್ನೆಲ್ಲೆಯಲ್ಲಿ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ-ಹವನ ನಡೆಯುತ್ತಿತ್ತು. ಅದೇ ರೀತಿ ನಗರದ ನಂಜುಡೇಶ್ವರ ದೇವರಿಗೆ ವಿಶೇಷ ಪೂಜೆ ನಡೆಯುತ್ತಿತ್ತು. ಈ ವೇಳೆ ಸಂಗೀತ ನಿರ್ದೇಶಕ ಹಂಸಲೇಖ ಅವರು ದೇವಾಲಯಕ್ಕೆ ಭೇಟಿ ನೀಡಿ ನಂಜುಡೇಶ್ವರನಿಗೆ ಅರ್ಚನೆ ಮಾಡಿಸಿ ಪೂಜೆ ಸಲ್ಲಿಸಿದ್ದಾರೆ.

ಶುಕ್ರವಾರ ಪೂರ್ಣಿಮೆ ಹಾಗೂ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನಂಜಗೂಡಿನಲ್ಲಿ ನಂಜುಡೇಶ್ವರನ ರಥೋತ್ಸವ ನಡೆದಿದ್ದು, ಉತ್ಸವ ಮೂರ್ತಿಯನ್ನು ರಥದ ಮೇಲಿರಿಸಿ ರಥೋತ್ಸವ ಮಾಡಿದ್ದಾರೆ. ಭಕ್ತರಿಗೆ ಹಾಗೂ ರಾಜ್ಯದ ಜನತೆ ಒಳಿತಾಗುವಂತೆ ನಂಜುಡೇಶ್ವರನ ರಥೋತ್ಸವ ನರೆವೇರಿದೆ. ಬಳಿಕ ಗ್ರಹಣದ ಹಿನ್ನೆಲೆಯಲ್ಲಿ ರಥೋತ್ಸವದ ನಂತರ ಅರ್ಚಕರು ದೇವಸ್ಥಾನದ ಬಾಗಿಲು ಹಾಕಿದ್ದಾರೆ.

ಎಂದಿನಂತೆ ಶುಕ್ರವಾರ ರಾತ್ರಿ 8.30ಕ್ಕೆ ದೇವಸ್ಥಾನದ ಬಾಗಿಲು ಬಂದ್ ಆಗಿದ್ದು, ಎಂದಿನಂತೆ ಇಂದು ಬೆಳಗ್ಗೆ 6.00 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆರೆದಿದ್ದಾರೆ. ದೇವಾಲಯದ ಬಾಗಿಲು ತೆರದ ನಂತರ ಕಪಿಲ ನದಿ ನೀರಿನಿಂದ ದೇವಸ್ಥಾನದ ಶುದ್ಧಿ ಕಾರ್ಯ ಮಾಡಿದ್ದಾರೆ. ಬಳಿಕ ನಂಜುಡೇಶ್ವರನಿಗೆ ವಿವಿಧ ಅಭಿಷೇಕಗಳ ನಂತರ ಮಹಾಮಂಗಳಾರತಿ ನಡೆಯಲಿದೆ.

Comments

Leave a Reply

Your email address will not be published. Required fields are marked *