ಆಪ್ತರೇ ನನ್ನ ಬೆನ್ನಿಗೆ ಚೂರಿ ಹಾಕಿದ್ರು : ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳೂರು: ಆಪ್ತರ ವಲಯದಲ್ಲಿ ನನ್ನ ಅಭಿಪ್ರಾಯ ಹಂಚಿಕೊಂಡಿದ್ದು, ನನ್ನ ಜೊತೆಗಿರುವ ಆಪ್ತರೇ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸರ್ಕಾರದ ಅವಧಿಯ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಮೈಸೂರಿನ ಆಪ್ತರ ಜೊತೆ ಮಾತನಾಡಿದ್ದು, ನನ್ನನ್ನು ಭೇಟಿ ಮಾಡಲು ಬಂದ ಆಪ್ತರೊಂದಿಗೆ ನಾನು ಅಭಿಪ್ರಾಯ ಹಂಚಿಕೊಂಡಿದ್ದೆ. ಆದರೆ ಅದನ್ನು ರೆಕಾರ್ಡ್ ಮಾಡಿ ಮಾಧ್ಯಮಗಳಿಗೆ ನೀಡಿ ವೈರಲ್ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಕುರಿತು ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ವಿವಾದವನ್ನು ಉಂಟು ಮಾಡಲು ಈ ರೀತಿ ಮಾಡಿದ್ದಾರೆ. ಸರ್ಕಾರದ ಕುರಿತು ಉದ್ದೇಶ ಪೂರ್ವಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಹೇಳಿದ್ದೇನು: ಸಿದ್ದರಾಮಯ್ಯ ಅವರ ಹೇಳಿಕೆ ವಿಡಿಯೋ ಮಂಗಳವಾರವಷ್ಟೇ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವ್ಯಕ್ತಿಯೊಬ್ಬರೊಂದಿಗೆ ಮಾತುಕತೆ ನಡೆಸುತ್ತಿದ್ದು, ಈ ವೇಳೆ ವ್ಯಕ್ತಿ ಸರ್ಕಾರದ ಅವಧಿಯ ಕುರಿತು ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆಯ ಮುಗಿದ ಬಳಿಕ ಸರ್ಕಾರದ ಕುರಿತು ಏನಾಗುತ್ತೇ ಎಂದು ನೋಡೋಣ. ಪಾರ್ಲಿಮೆಂಟ್ ಎಲೆಕ್ಷನ್ ವರೆಗೂ ಸರ್ಕಾರ ಇರುತ್ತೆ. ಪಾರ್ಲಿಮೆಂಟ್ ಎಲೆಕ್ಷನ್ ಬಳಿಕ ಏನು ಬೆಳವಣಿಗೆ ಆಗುತ್ತೆ ನೋಡೋಣ ಎಂದು ಹೇಳಿದ್ದರು.

Comments

Leave a Reply

Your email address will not be published. Required fields are marked *