ಮಾಧ್ಯಮಗಳಿಗೆ ಮಾಹಿತಿ ನೀಡಿದ್ರೆ ಅಮಾನತು – ಪೊಲೀಸ್ ಇಲಾಖೆಯಲ್ಲಿ ಹೊಸ ಆರ್ಡರ್

ಮೈಸೂರು: ಮಾಧ್ಯಮಗಳಿಗೆ ಮಾಹಿತಿ ನೀಡಿದರೆ ಅಮಾನತು ಮಾಡುತ್ತೇವೆ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಕೆ.ಟಿ. ಬಾಲಕೃಷ್ಣ ಲಿಖಿತ ರೂಪದಲ್ಲಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಏನಿದೆ?
ರಾಜ್ಯ ಸರ್ಕಾರದ ಮಾಧ್ಯಮ ನಿಮಯದ ಪ್ರಕಾರ ಎಸ್ಪಿ, ಪೊಲೀಸ್ ಆಯುಕ್ತರು ಮತ್ತು ವಲಯ ಐಜಿಪಿಯವರು ಅಥವಾ ಇವರಿಂದ ಅನುಮೋದನೆಗೊಂಡ ನೋಡೆಲ್ ಅಧಿಕಾರಿಗಳು ಮಾತ್ರ ಮಾಧ್ಯಮಕ್ಕೆ ಮಾಹಿತಿ ಕೊಡಬೇಕು.

ಈ ನಿಯಮದ ಪ್ರಕಾರ ಮೈಸೂರು ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಅನುಮತಿ ಇಲ್ಲದೆ ಇಲಾಖೆಯ ಯಾವುದೇ ವಿವರಗಳನ್ನು ಮಾಧ್ಯಮಗಳಿಗೆ ನೀಡುವಂತಿಲ್ಲ. ಒಂದು ವೇಳೆ ನೀಡಿದರೆ ವಿಚಾರಣೆ ಬಾಕಿ ಇರಿಸಿಕೊಂಡು ಅಮಾನತು ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಪೊಲೀಸ್ ಆಯುಕ್ತರ ಈ ಆದೇಶದಿಂದ ಇಡೀ ಪೊಲಿಸ್ ಇಲಾಖೆಯೇ ಬೆಸ್ತು ಬಿದ್ದಿದೆ.

Comments

Leave a Reply

Your email address will not be published. Required fields are marked *