ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ: ಡಾ.ಎಚ್.ಸಿ ಮಹದೇವಪ್ಪ

ಮೈಸೂರು: ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾಲ್ವರು ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕಾತಿಯಿಂದ ಪಕ್ಷದ ಸಂಘಟನೆಗೆ ಅನುಕೂಲ ಆಗುತ್ತದೆ. ಯಾವುದೇ ಗುಂಪುಗಾರಿಕೆ ಆಗಲ್ಲ. ಯಾರಿಗೆ ಯಾವ ಹುದ್ದೆ ನೀಡಬೇಕು ಎಂಬುದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಇಡೀ ದೇಶದಲ್ಲಿ ಪ್ರಜಾಪ್ರಭುತ್ವವೇ ಬುಡಮೇಲಾಗುತ್ತಿದೆ. ಅದರ ವಿರುದ್ಧ ಹೋರಾಟ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಇದ್ದೇವೆ. ಆದ್ದರಿಂದ ಎಲ್ಲರೂ ಸಂಘಟಿತರಾಗಿ ಹೋರಾಟ ಮಾಡಬೇಕಿದೆ ಎಂದು ಹೇಳಿದರು.

Comments

Leave a Reply

Your email address will not be published. Required fields are marked *