ಲಾಕ್‍ಡೌನ್ ನಡುವೆಯೇ ಕಳ್ಳತನ- ಸರ ಕದ್ದು ಸಿಕ್ಕಾಕ್ಕೊಂಡ ಖದೀಮರು

ಮೈಸೂರು: ಇಡೀ ದೇಶವೇ ಕೊರೊನಾ ವೈರಸ್ ಎಂಬ ಮಹಾಮಾರಿಯನ್ನು ಎದುರಿಸುತ್ತಿದೆ. ಈ ಮಧ್ಯೆ ಮೈಸೂರಿನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಹೌದು. ಗುರುವಾರ ರಾತ್ರಿ ಖದೀಮರು ಸರಗಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ.

ಮಹದೇಶ್ವರ ಬಡಾವಣೆಯಲ್ಲಿ ಮಹಿಳೆಯಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. ನಂತರ ರಿಂಗ್‍ರಸ್ತೆ ಹಾಗೂ ಕಾರ್ಪೋರೇಷನ್ ಬ್ಯಾಂಕ್ ಬಳಿಯೂ ಸರಗಳ್ಳತನ ಮಾಡಿ ಪಲ್ಸರ್ ಬೈಕಿನಲ್ಲಿ ಕಳ್ಳರು ಪರಾರಿಯಾಗುತ್ತಿದ್ದರು.

ಈ ವೇಳೆ ಮೈಸೂರಿನ ವಿಜಯನಗರ ಪೊಲೀಸರ ಕಾರ್ಯಚರಣೆ ನಡೆಸಿ ಮೂವರನ್ನು ಬೆನ್ನತ್ತಿ ಹಿಡಿದಿದ್ದಾರೆ. ಬಂಧಿತರಿಂದ ಒಂದು ಬೈಕ್, ಚಾಕು, ಖಾರದಪುಡಿ ಹಾಗೂ ಕಳ್ಳತನ ಮಾಡಿದ್ದ ಮೂರು ಚಿನ್ನದ ಸರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *