ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

ಮೈಸೂರು: ಹೆಚ್. ಡಿ ದೇವೇಗೌಡರ ಕುಟುಂಬದ ಕಣ್ಣೀರಿಗೆ ಮಾಜಿ ಸಚಿವ ಸಾರಾ ಮಹೇಶ್ ಕಾರಣ ಎಂದು ಅನರ್ಹ ಜೆಡಿಎಸ್ ಶಾಸಕ ಎಚ್ ವಿಶ್ವನಾಥ್ ಹೇಳಿದ್ದಾರೆ.

ಇಂದು ಕೆ.ಆರ್. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ದೇವೇಗೌಡರ ಮನೆಯವರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದರೆ ಎಂದರೆ ಅದಕ್ಕೆ ಸಾರಾ ಮಹೇಶ್ ಮತ್ತು ಆತನ ಕೆಲ ಸ್ನೇಹಿತರು ಕಾರಣ. ದೇವೇಗೌಡರ ಮನೆಗೆ ಇವತ್ತು ಅನ್ಯಾಯವಾಗಿದ್ದರೆ ಅದಕ್ಕೂ ಸಾರಾ ಮಹೇಶ್ ಕಾರಣ. ದೇವೇಗೌಡರ ಕಣ್ಣೀರಿಗೂ ಅವರೇ ಕಾರಣ ಎಂದು ಕಿಡಿಕಾರಿದರು.

ಸಾರಾ ಮಹೇಶ್ ದುರಹಂಕಾರದಿಂದ ಒಕ್ಕಲಿಗ ಶಾಸಕರೇ ಜೆಡಿಎಸ್‍ನಿಂದ ದೂರವಾದರು. ಇವತ್ತಿನ ದೇವೇಗೌಡರ ಈ ಸ್ಥಿತಿಗೆ ನಾವಲ್ಲ ಕಾರಣ ನೀವು. ಮಹೇಶ್ ಕ್ಷೇತ್ರದಲ್ಲಿ ಕೆಲವರಿಗೆ 500 ರೂಪಾಯಿ, 1 ಸಾವಿರ ರೂಪಾಯಿ ಕೊಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಆದರೆ ನನ್ನದ್ದು ಅಭಿವೃದ್ಧಿ ರಾಜಕಾರಣ. ಮೊದಲು ಸುಳ್ಳು ಹೇಳುವುದನ್ನು ನಿಲ್ಲಿಸಿ. ಕೆ.ಆರ್. ನಗರದ ಅಭಿವೃದ್ಧಿಗೆ ನಾನು ಮಾಡಿದಷ್ಟು ಕೆಲಸ ನೀವು ಮಾಡಿಲ್ಲ ಎಂದು ವಾಗ್ದಾಳಿ ಮಾಡಿದರು.

ಈ ವೇಳೆ ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಬಗ್ಗೆ ಮಾತನಾಡಿದ ವಿಶ್ವನಾಥ್, ಕಾನೂನುಗಿಂತ ಯಾರು ದೊಡ್ಡವರಲ್ಲ. ಡಿಕೆಶಿ ಇದೆಲ್ಲದರಿಂದ ಬಹು ಬೇಗ ಮುಕ್ತವಾಗಿ ಹೊರ ಬರಲಿ. ಹೊರ ಬಂದು ರಾಜಕಾರಣ ಮಾಡಬೇಕು ಎಂದು ಹಾರೈಸಿದರು.

Comments

Leave a Reply

Your email address will not be published. Required fields are marked *