ರೇಷನ್ ಅಕ್ಕಿಗಾಗಿ ಬಯೋಮೆಟ್ರಿಕ್ ಕೊಡಲು ಹೋಗುತ್ತಿದ್ದ ಅಪ್ಪ-ಮಗನ ಮೇಲೆ ಹರಿದ ಬಸ್

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ಪ-ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮೈಸೂರು ತಾಲೂಕು ಕೋಟೆಹುಂಡಿ ಸರ್ಕಲ್ ಬಳಿ ನಡೆದಿದೆ.

ಹೆಗ್ಗಡದೇವನಕೋಟೆ ತಾಲೂಕಿನ ಕಟ್ಟೆಹುಣಸೂರು ನಿವಾಸಿಗಳಾದ ಪ್ರಕಾಶ್ (50) ಹಾಗೂ ಸುರೇಶ್(23) ಮೃತ ದುರ್ದೈವಿಗಳು. ಇವರು ಮೈಸೂರಿನ ಜೆ.ಪಿ.ನಗರದ ಮಹದೇವುಪರದಲ್ಲಿ ವಾಸವಿದ್ದರು.

ರೇಷನ್ ಅಕ್ಕಿಗಾಗಿ ಬೈಯೋಮೆಟ್ರಿಕ್ (ಥಂಬ್ ಇಂಪ್ರೆಷನ್) ಕೊಡಲು ಕಟ್ಟೆಹುಣಸೂರಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮೈಸೂರು ಗ್ರಾಮಾಂತರ ಪೊಲೀಸ್ ಪರಿಶೀಲನೆ ನಡೆಸಿದ್ದಾರೆ. ಪ್ರಕಾಶ್ ಹಾಗೂ ಸುರೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Comments

Leave a Reply

Your email address will not be published. Required fields are marked *