ಕುದುರೆ ಸವಾರಿ ಮಾಡಿಕೊಂಡೇ ಜನರ ಸಮಸ್ಯೆ ಆಲಿಸಿದ ಮೈಸೂರು ಮೇಯರ್

ಮೈಸೂರು: ನಗರದಲ್ಲಿ ಇಂದು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಎಂ.ಜೆ ರವಿಕುಮಾರ್ ಕುದುರೆ ಸವಾರಿ ಮಾಡುತ್ತಾ ನಗರದ ಸಮಸ್ಯೆ ಆಲಿಸಿದರು.

ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಮೇಯರ್ ಕುದುರೆ ಓಡಿಸುವ ತರಬೇತಿ ಪಡೆಯುತ್ತಿದ್ದಾರೆ. ಜಂಬೂಸವಾರಿ ಮೆರವಣಿಗೆಯಲ್ಲಿ ಮೇಯರ್ ಹಾಗೂ ಜಿ.ಪಂ ಅಧ್ಯಕ್ಷರು ಭಾಗವಹಿಸುವುದು ಸಂಪ್ರದಾಯವಾಗಿದೆ. ಇದಕ್ಕಾಗಿ ಮೇಯರ್ ಕುದುರೆ ಸವಾರಿ ತಾಲೀಮು ನಡೆಸುತ್ತಿದ್ದಾರೆ. ಹೀಗೆ ಕುದುರೆ ಸವಾರಿ ಮಾಡುತ್ತಾ ನಗರ ಪ್ರದಕ್ಷಿಣೆ ಕೂಡ ಮಾಡಿದರು.

ಮೈಸೂರಿನ ಕೆ.ಆರ್ ವೃತ್ತ ಸಯ್ಯಾಜಿರಾವ್ ರಸ್ತೆ ಸೇರಿದಂತೆ ಹಲವು ಭಾಗಗಳಲ್ಲಿ ಪರಿಶೀಲನೆ ನಡೆಸಿ ಫುಟ್‍ಪಾತ್ ತೆರವುಗೊಳಿಸುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಿದರು. ಕುದುರೆ ಮೇಲೆ ಕುಳಿತು ವಾಕಿ ಟಾಕಿಯಲ್ಲಿ ಅಧಿಕಾರಿಗಳಿಗೂ ಖಡಕ್ ಎಚ್ಚರಿಕೆ ನೀಡಿದರು. ಕಾರಿನಲ್ಲಿ ಓಡಾಡುತ್ತಾ ನಗರ ಪ್ರದಕ್ಷಿಣೆ ಮಾಡುತ್ತಿದ್ದ ಮೇಯರ್ ಹೀಗೆ ಕುದುರೆಯಲ್ಲಿ ಓಡಾಡುತ್ತಾ ಜನರ ಸಮಸ್ಯೆ ಆಲಿಸಿದ್ದನ್ನು ಜನರು ಕುತೂಹಲದಿಂದ ನೋಡುತ್ತಿದ್ದರು.

Comments

Leave a Reply

Your email address will not be published. Required fields are marked *