ಪಟ್ಟು ಬಿಡದೆ ಪವರ್ ತೋರಿದ ಸಿದ್ದರಾಮಯ್ಯ – `ಕೈ’ ಅಭ್ಯರ್ಥಿಗೆ ಒಲಿದ ಮೇಯರ್ ಪಟ್ಟ

ಮೈಸೂರು: ಮಹಾನಗರ ಪಾಲಿಕೆ ಮೇಯರ್ ಪಟ್ಟಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪಟ್ಟು ಬಿಡದೆ ಕಾಂಗ್ರೆಸ್ ಅಭ್ಯರ್ಥಿಗೆ ಮೇಯರ್ ಪಟ್ಟ ಲಭಿಸುವಂತೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಷ್ಪಲತಾ ಜಗನ್ನಾಥ್ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಇಂದು ನಡೆದ ಚುನಾವಣೆಯಲ್ಲಿ ಪುಷ್ಪಲತಾ ಜಗನ್ನಾಥ್ ಅವರಿಗೆ 48 ಮತಗಳು ಲಭಿಸಿದ್ದು, ಈ ಮೂಲಕ 21 ನೇ ಅವಧಿಗೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರಾ ಅವರು 24 ಮತಗಳನ್ನು ಪಡೆದರು. ಪಾಲಿಕೆಯ ನೂತನ ಉಪ ಮೇಯರ್ ಆಗಿ ಜೆಡಿಎಸ್ ಅಭ್ಯರ್ಥಿ ಶಫಿ ಅಹಮದ್ ಆಯ್ಕೆಯಾದರು. ಇತ್ತ ತಮ್ಮ ಗೆಲುವು ಖಚಿತವಾಗುತ್ತಿದಂತೆ ಮೇಯರ್ ಪುಷ್ಪಲತಾ ಅವರು ಕೌನ್ಸಿಲ್ ಸಭಾಂಗದಲ್ಲಿ ಎಲ್ಲಾ ಸದಸ್ಯರ ಬಳಿಗೆ ಹೋಗಿ ಕೈ ಮುಗಿದು ಧನ್ಯವಾದ ಅರ್ಪಿಸಿದರು.

ಈ ಚುನಾವಣೆಯ ಗೆಲುವು ಪುಷ್ಪಲತಾ ಅವರ ಗೆಲುವಾದರು ಇದರ ಹಿಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ತಂತ್ರ ಫಲನೀಡಿದೆ ಎಂದು ಹೇಳಬಹುದು. ಇದರೊಂದಿಗೆ ಮೈತ್ರಿ ಸರ್ಕಾರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗೆ ಜಯಭೇರಿ ಆಗಿದ್ದು, ತಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ ಎಂಬ ಸೂಚನೆ ನೀಡಲು ನಾಯಕರು ಯಶಸ್ವಿಯಾದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *