ಕಾಂಗ್ರೆಸ್ ಟೀಕಿಸಲು ಅಭಿಮಾನಿಗಳಿಗೆ ರಸಪ್ರಶ್ನೆ ಆರಂಭಿಸಿದ ಪ್ರತಾಪ್ ಸಿಂಹ!

ಮೈಸೂರು: ಸಂಸದ ಪ್ರತಾಪ್ ಸಿಂಹ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಸಾಮಾಜಿಕ ಜಾಲತಾಣದಲ್ಲಿ ರಸಪ್ರಶ್ನೆ ಕೇಳುವ ಮೂಲಕ ಟಾಂಗ್ ನೀಡಲು ಆರಂಭಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ವಿನಯ್ ಕುಲರ್ಣಿ ಹಾಗೂ ಮೈಸೂರು ಎಸ್‍ಪಿ ರವಿ ಡಿ.ಚನ್ನಣ್ಣವರ್ ವಿರುದ್ಧ ಹಲವು ಪೋಸ್ಟ್ ಮಾಡಿ ಪ್ರಶ್ನೆ ಕೇಳುತ್ತಿದ್ದಾರೆ.

ಸಿಂಹ ಪ್ರಶ್ನೆಗಳು:
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರಿಗೆ ಕಪಾಳಕ್ಕೆ ಹೊಡೆದ ಪುಂಡ ಯಾರು? ಬಳ್ಳಾರಿ ನಗರ ಪಾಲಿಕೆ ಅಧಿಕಾರಿಯ ಕಪಾಳಕ್ಕೆ ಹೊಡೆದವರ ವಿರುದ್ಧ ಕೇಸು ದಾಖಲಾಗಿದೇಯೋ ಇಲ್ವೋ? ಓಬವ್ವನಿಗೆ ಹಿಂದಿನಿಂದ ಚೂರಿ ಹಾಕಿದವನ ಜಯಂತಿ ಆರಂಭಿಸಿದ ಸರ್ಕಾರ ಯಾವುದು? ಮೈಸೂರಿನ ಕೆ.ಆರ್.ನಗರದಲ್ಲಿ ಅಂಟಿಸಿರುವ ಪೋಸ್ಟರ್ ಗಳ ವಿರುದ್ಧ ಕ್ರಮ ಕೈಗೊಳ್ಳುವವರು ಯಾರು ಇಲ್ಲವೆ? ಎಂಬ ಪ್ರಶ್ನೆಗಳನ್ನು ಟ್ಟಿಟ್ಟರ್ ಮತ್ತು ಫೇಸ್‍ಬುಕ್ ನಲ್ಲಿ ಕೇಳಿದ್ದಾರೆ.

ಮಂಗಳವಾರದಿಂದ ಸಾಮಾಜಿಕ ಜಾಲತಾಣದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದಕ್ಕೆ ಟ್ವಿಟ್ಟರ್ ಹಾಗೂ ಫೇಸ್ ಬುಕ್ ಬಳಕೆದಾರರು ತಮಗೆ ತೊಚಿದಂತೆ ಉತ್ತರಗಳನ್ನು ನೀಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *