ರಾಜ್ಯದಲ್ಲಿ ಮೈತ್ರಿ ಧರ್ಮ, ಆದ್ರೆ ಮಂಡ್ಯ ಬಿಟ್ಟು ಬಿಡಿ: ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ವಿರುದ್ಧ ಬಂಡಾಯ ಹೂಡಿರುವ ಮಾಜಿ ಶಾಸಕರು ಮನವೊಲಿಕೆ ಕರೆದಿದ್ದ ಸಭೆ ವಿಫಲವಾಗಿದೆ. ಸಭೆ ಬಳಿಕ ಮಾತನಾಡಿದ ಮಾಜಿ ಶಾಸಕ ಚಲುವರಾಯಸ್ವಾಮಿ ಅವರು, ರಾಜ್ಯದಲ್ಲಿ ಮೈತ್ರಿ ಧರ್ಮ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

ಕಾವೇರಿ ನಿವಾಸದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಇಂದಿನ ಸಭೆ ಕೇವಲ ಪಕ್ಷದ ಸಭೆ ಆಗಿದ್ದು, ಮೈತ್ರಿ ಕುರಿತಾದ ಸಭೆ ಅಲ್ಲ. ಮಂಡ್ಯದ ಎಂಟು ಕ್ಷೇತ್ರದ ಪರಾಜಿತ ಅಭ್ಯರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪಾತ್ರ ಏನು ಇರುವುದಿಲ್ಲ. ರಾಜ್ಯದಲ್ಲಿ ಮೈತ್ರಿ ಮುಂದುವರಿಯುತ್ತದೆ. ಆದರೆ ಮಂಡ್ಯ ಕ್ಷೇತ್ರವನ್ನು ಬಿಟ್ಟು ಬಿಡಿ ಈ ಬಗ್ಗೆ ಕೇಳಬೇಡಿ ಎಂದು ಮಾಧ್ಯಮಗಳಿಗೆ ಉತ್ತರಿಸಿದರು.

ಚುನಾವಣೆಗೆ ಕೆಲ ದಿನಗಳಲೇ ಇರುವ ಕಾರಣ ಸಿದ್ದರಾಮಯ್ಯ ಅವರು ನಾಳೆಯಿಂದ ಬಿಡುವಿಲ್ಲದ ಪ್ರಚಾರದಲ್ಲಿ ತೊಡಗುತ್ತಾರೆ. ಮಂಡ್ಯ ಕ್ಷೇತ್ರದಲ್ಲಿ ನಮ್ಮ ಮೇಲೆ ಸಿದ್ದರಾಮಯ್ಯ ಅವರು ಡಿಪೆಂಡ್ ಆಗಿದ್ದರೆ ನಾವು ಕಾರ್ಯಕರ್ತರ ಮೇಲೆ ಡಿಪೆಂಡ್ ಆಗಿದ್ದೇವೆ. ಅದ್ದರಿಂದ ಕಾರ್ಯಕರ್ತರೊಂದಿಗೆ ಮಾತನಾಡಿ ತೀರ್ಮಾನಕ್ಕೆ ಬರುತ್ತೇವೆ. ಮತ್ತೆ ಸಭೆ ನಡೆಸಲು ಸಮಯ ಇಲ್ಲ ಎಂದರು.

ಮಂಡ್ಯ ಮೈತ್ರಿ ವಿಚಾರದಲ್ಲಿ ಕುಮಾರಸ್ವಾಮಿ ಸೂಕ್ಷ್ಮವಾಗಿ ಹೇಳಿದ್ದಾರೆ. ಜನರ ತೀರ್ಮಾನಕ್ಕೆ ಬಿಟ್ಟು ಬಿಡೋಣ ಎಂದು ಅವರೇ ಹೇಳಬಹುದು ಎಂದು ನಿನ್ನೆಯೇ ತಿಳಿಸಿದ್ದೇನೆ. ಉಳಿದ ಕ್ಷೇತ್ರದಲ್ಲಿ ಮೈತ್ರಿಯಾಗಿ ಹೋಗೋಣ ಎಂದು ನಾನು ನಾಯಕರಿಗೆ ತಿಳಿಸಿದ್ದೇನೆ. ನಮ್ಮ ಕಾರ್ಯಕರ್ತರನ್ನು ಕೇಳದೆ ನಾವು ಯಾವ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಈ ಜಿಲ್ಲೆ ಬಿಟ್ಟು ಉಳಿದ ಕಡೆ ಮೈತ್ರಿ ಧರ್ಮ ಪಾಲಿಸೋಣ ಎಂದರು.

ಶಿಸ್ತುಕ್ರಮಕ್ಕೆ ಸ್ವಾಗತ: ಇದೇ ವೇಳೆ ಅತೃಪ್ತರ ವಿರುದ್ಧ ಶಿಸ್ತು ಕ್ರಮದ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದರೆ ನಾಯಕರ ಈ ನಿರ್ಧಾರವನ್ನು ನಾನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ನಮ್ಮ ನಾಯಕರು ಹೊಡೆದರೆ ಅದನ್ನೇ ಒಂದು ಆಶೀರ್ವಾದ ಎಂದು ಕೊಳ್ಳುತ್ತೇವೆ. ಮಂಡ್ಯದಲ್ಲಿ ನಮ್ಮ ಪಾತ್ರ ಇರಲ್ಲ ಎಂದು ಸ್ಪಷ್ಟಪಡಿಸಿದರು.

Comments

Leave a Reply

Your email address will not be published. Required fields are marked *