ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಿದ್ದು, ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ನೀಡಿದ್ದಾರೆ.

ಮುಳುಬಾಗಿಲಿನಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್ ಅವರಿಗೆ ಬಳಿಕ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಇದೀಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅತೃಪ್ತರ ಗುಂಪು ಸೇರಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಸರ್ಕಾರ ಉಳಿಸಿಕೊಳ್ಳಲು 21 ದಿನಗಳ ಹಿಂದೆ ನಾಗೇಶ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಕಾಂಗ್ರೆಸ್ ಸಚಿವರ ಸಾಮೂಹಿಕ ರಾಜೀನಾಮೆಯ ಹಿನ್ನೆಲೆಯಲ್ಲಿ ನಾಗೇಶ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಸಿಎಂ ಅಮೆರಿಕದಿಂದ ಬಂದ ಬಳಿಕ ತಡರಾತ್ರಿ ಸಭೆಯ ಮೇಲೆ ಸಭೆ ನಡೆಸಿದ್ದಾರೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು 10 ಮಂದಿ ಸಚಿವರ ರಾಜೀನಾಮೆ ನೀಡಲು ಸೂಚನೆ ನೀಡಿದ್ದರು. ಹೀಗಾಗಿ ಸರ್ಕಾರ ಉಳಿಯಲ್ಲ ಎಂಬುದನ್ನು ಮನಗಂಡ ನಾಗೇಶ್ ರಾಜೀನಾಮೆ ಕೊಟ್ಟಿರಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ದೋಸ್ತಿ ಸರ್ಕಾರದ 13 ಶಾಸಕರು ರಾಜೀನಾಮೆ

Comments

Leave a Reply

Your email address will not be published. Required fields are marked *