ಡೀಸೆಲ್ ಟ್ಯಾಂಕರ್ ಸ್ಫೋಟಿಸಿ ನಕ್ಸಲರ ಅಟ್ಟಹಾಸ – ಮೂವರು ಬಲಿ

ರಾಯ್ಪುರ: ಛತ್ತೀಸ್‍ಗಢದ ಕಂಕರ್ ಜಿಲ್ಲೆಯಲ್ಲಿ ರೈಲ್ವೆ ಹಳಿ ನಿರ್ಮಾಣ ಕೆಲಸ ಮಾಡುತ್ತಿದ್ದಾಗ ಡೀಸೆಲ್ ಟ್ಯಾಂಕರ್ ಒಂದನ್ನು ನಕ್ಸಲಿಯರು ಸುಧಾರಿತ ಸ್ಫೋಟಕ ಸಾಧನ(ಐಇಡಿ) ಇಟ್ಟು ಸ್ಫೋಟಿಸಿದ್ದು, ನಕ್ಸಲಿಯರ ಅಟ್ಟಹಾಸಕ್ಕೆ ಮೂವರು ನಾಗರಿಕರು ಬಲಿಯಾಗಿದ್ದಾರೆ.

ಕಂಕರ್ ಜಿಲ್ಲೆಯ ತುಮಾ ಪಾಲ್ ಗ್ರಾಮದ ಬಳಿ ಸೋಮವಾರ ರಾತ್ರಿ ನಕ್ಸಲಿಯರು ಈ ಕೃತ್ಯವೆಸೆಗಿದ್ದಾರೆ. ಜಿಲ್ಲೆಯ ರೌಫಾಟ್ ಪ್ರದೇಶದಲ್ಲಿ ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದ ಟ್ರಕ್ ಮ್ಯಾನ್‍ಗಳು ಹಾಗೂ ಟ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ಈ ದಾಳಿ ನಡೆಸಿದ್ದಾರೆ. ಕೆಲಸ ನಡೆಯುತ್ತಿದ್ದ ಪ್ರದೇಶದಲ್ಲಿ ಐಇಡಿ ಸ್ಫೋಟಿಸಿ ನಕ್ಸಲಿಯರು ಅಟ್ಟಹಾಸ ಮೆರೆದಿದ್ದಾರೆ.

ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಪರಿಸ್ಥಿತಿಯ ಬಗ್ಗೆ ಪರಿಶೀಲಿಸಲು ಜವಾನರು ಸ್ಥಳಕ್ಕೆ ಹೋದಾಗ, ಅಲ್ಲಿಯೇ ಹೊಂಚು ಹಾಕಿ ಕುಳಿತ್ತಿದ್ದ ನಕ್ಸಲರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಕಂಕರ್ ಎಸ್‍ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗೃತ ಕ್ರಮವಾಗಿ ಘಟನಾ ಸ್ಥಳವನ್ನು ಹಾದು ಹೋಗುವ ಭಾನುಪ್ರತಾಪ್‍ಪುರ ಹಾಗೂ ನಾರಾಯಣ್‍ಪುರ ಮಾರ್ಗದ ರಸ್ತೆ ಸಂಚಾರವನ್ನು ಕೆಲ ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ. ಅಲ್ಲದೆ ನಕ್ಸಲರಿಗಾಗಿ ಹುಡುಕಾಟ ನಡೆಸಲಾಗಿದೆ

Comments

Leave a Reply

Your email address will not be published. Required fields are marked *