ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ- ಬರೋಬ್ಬರಿ 850ಕ್ಕೂ ಹೆಚ್ಚು ಮೊಬೈಲ್ ಫೋನ್ ವಶಕ್ಕೆ

ನೆಲಮಂಗಲ(ಬೆಂಗಳೂರು): ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಹಳೆಯ ಪ್ರಕರಣಕ್ಕೆ ಮಾದನಾಯಕನಹಳ್ಳಿ ಪೊಲೀಸರು ನಾಂದಿಯಾಡಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ಉಪವಿಭಾಗ ಮಾದನಾಯಕನಹಳ್ಳಿ ಪೊಲೀಸರು ಬರೋಬ್ಬರಿ 60 ಲಕ್ಷ ಮೌಲ್ಯದ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಅಲ್ಲದೆ 6 ಮಂದಿಯನ್ನು ಬಂಧಿಸಿದ್ದಾರೆ. ಯೋಗೇಶ್, ಸಂದೀಪ್, ವಾಸೀಂ, ಹರಿ, ರವಿಕಿರಣ್ ಭವೇಶ್ ಜೈನ್ ರನ್ನು ಬಂಧಿಸಿ ನ್ಯಾಯಾಲಯದ ವಶಕ್ಕೆ ನೀಡಲಾಗಿದೆ. ಇದನ್ನೂ ಓದಿ: UAE T20 ಲೀಗ್‍ನ ಕ್ರಿಕೆಟ್ ತಂಡ ಖರೀದಿಸಿದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್

ಈ ಆರೋಪಿಗಳು ಶೋಕಿಗಾಗಿ ಹಾಗೂ ಪ್ರೇಯಸಿಯನ್ನ ಖುಷಿಪಡಿಸಲು ಈ ಖದೀಮರು ಕಳ್ಳತನ ಮಾರ್ಗ ಹಿಡಿದಿದ್ದರಂತೆ. ಅಲ್ಲದೆ ಕದ್ದ ಮೊಬೈಲ್ ಗಳನ್ನ ಸಾಕಷ್ಟು ತಿಂಗಳ ಕಾಲ ಮಾರಾಟ ಮಾಡದೆ ಒಂದೆಡೆ ಶೇಕರಿಸಿ ನಂತರ ಪೊಲೀಸರ ಕಣ್ ತಪ್ಪಿಸಿ ಮಾರಾಟ ಮಾಡುವ ವೇಳೆ ಒಂದು ಮೊಬೈಲ್ ಸಿಮ್ ನ ಸುಳಿವು ಆಧರಿಸಿ ಪೊಲೀಸರು ಆರೋಪಿಗಳನ್ನ ಖೆಡ್ಡಾಕ್ಕೆ ಕೆಡವಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣೀಕೃತ ಮಾಂಸ ಮಾತ್ರ ಸೇವಿಸಬೇಕೆಂದ ಬಿಸಿಸಿಐ

ಮಾದನಾಯಕನಹಳ್ಳಿ ಸಿಪಿಐ ಮಂಜುನಾಥ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಎಸ್‍ಪಿ ಕೋನವಂಶಿ ಕೃಷ್ಣ, ಎಎಸ್ ಪ್ಪಿ ಲಕ್ಷ್ಮಿ ಗಣೇಶ್, ಡಿವೈಎಸ್ ಪಿ ಜಗದೀಶ್ ಮಾದನಾಯಕನಹಳ್ಳಿ ಪೊಲೀಸರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Comments

Leave a Reply

Your email address will not be published. Required fields are marked *