ಚಿಕ್ಕಮಗಳೂರು: ಮಕ್ಕಳು ಆಗಲಿಲ್ಲವೆಂದು ಅನೇಕ ಮಹಿಳೆಯರು ದೇವರ ಮೊರೆ ಹೋಗುತ್ತಾರೆ. ಆದರೆ ವಿಕೃತ ಮನಸ್ಥಿತಿಯ ದುಷ್ಕುರ್ಮಿಗಳು ಕಣ್ಣು ಬಿಡುವ ಮೊದಲೇ ಶಿಶುವೊಂದನ್ನು ಹತ್ಯೆ ಮಾಡಿದ ಅಮಾನವೀಯ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ನಗರದ ಹಳೇ ತಾಲೂಕು ಕಚೇರಿ ಬಳಿ ಶಿಶುವಿನ ಮೃತ ದೇಹ ಪತ್ತೆಯಾಗಿದೆ. ಕೇವಲ ಒಂದು ದಿನದ ಶಿಶುವನ್ನು ಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯ ಬಳಿಕ ಶಿಶುವನ್ನು ಹಾಸಿಗೆಯಲ್ಲಿ ಸುತ್ತಿ ಜನದಟ್ಟಣೆ ಇಲ್ಲದ ಹಳೇ ತಾಲೂಕು ಕಚೇರಿಯ ಬಳಿ ಇರುವ ಪಾಳುಬಿದ್ದ ಕಟ್ಟಡದ ಹಿಂದೆ ಎಸೆದಿದ್ದಾರೆ. ಅಷ್ಟೇ ಅಲ್ಲದೆ ಮಗುವಿನ ಸುತ್ತ ಕಲ್ಲುಗಳನ್ನು ಇಟ್ಟಿದ್ದಾರೆ.
ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply