ಮನೆದೇವರ ಮುಂದೆ ಮಗನ ಮುಡಿ ಅರ್ಪಿಸಿದ ನಟ ನಿಖಿಲ್ ಕುಮಾರಸ್ವಾಮಿ

ಮೊನ್ನೆಯಷ್ಟೇ ಕೃಷ್ಣ ಜನ್ಮಾಷ್ಟಮಿ ದಿನದಂದು ಮಗನಿಗೆ ಜುಟ್ಟು ಕಟ್ಟಿ ಕೃಷ್ಣನ ವೇಷ ಹಾಕಿ ಸಂಭ್ರಮಿಸಿದ್ದ ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ, ಎರಡು ದಿನಗಳ ಹಿಂದೆಯಷ್ಟೇ ಮಗನಿಗೆ ಮನೆದೇವರ ಮುಂದೆ ಮುಡಿ ಅರ್ಪಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಬಹುತೇಕ ಸದಸ್ಯರು ಹಾಜರಿದ್ದು, ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

ಆಗಸ್ಟ್ 21 ರಂದು ಈ ಮುಡಿ ಕಾರ್ಯಕ್ರಮವು ಹೆಚ್.ಡಿ. ಕುಮಾರಸ್ವಾಮಿಗಳ ಮನೆ ದೇವರಾದ ಚನ್ನರಾಯಪಟ್ಟಣ ತಾಲೂಕಿನ ಯಲಿಯೂರು ಲಕ್ಷ್ಮಿ ದೇಗುಲದಲ್ಲಿ ನಡೆದಿದ್ದು, ವಿಶೇಷ ಪೂಜೆಯನ್ನೂ ಕುಟುಂಬ ಮಾಡಿದೆ. ಮೊಮ್ಮಗನಿಗೆ ಒಳ್ಳೆಯದಾಗಲಿ ಎಂದು ಹಲವು ಪೂಜಾ ಕಾರ್ಯಗಳನ್ನು ನೆರವೇರಿಸಿದ ನಿಖಿಲ್ ಕುಟುಂಬ. ಇದನ್ನೂ ಓದಿ:ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣನ ಹುಡುಕಿಕೊಂಡು ಬಂತು ಮತ್ತೊಂದು ಬಾಲಿವುಡ್ ಸಿನಿಮಾ

ಮುಡಿ ಕಾರ್ಯಕ್ರಮದ  ನಂತರ ಇಡೀ ಕುಟುಂಬ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಕುಲದೇವರು ದೇವೇಶ್ವರನಿಗೂ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಬೆಂಗಳೂರಿನ ವೆಂಕಟೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಮೊಮ್ಮಗನಿಗೆ ಅವ್ಯಾನ್ ದೇವ್ ಎಂದು ನಾಮಕರಣ ಮಾಡಿದ್ದರು ಹೆಚ್.ಡಿ. ಕುಮಾರಸ್ವಾಮಿ. ಇದೀಗ ಮುಡಿ ಶಾಸ್ತ್ರವನ್ನೂ ಮುಗಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *