ಕಾಂಗ್ರೆಸ್ ವಿರುದ್ಧ ನಿಖಿಲ್ ಅಭಿಮಾನಿಗಳು ಕಿಡಿ

ಬೆಂಗಳೂರು: ಕಾಂಗ್ರೆಸ್ ಮುಖಂಡರು ಮಂಡ್ಯದ ಪಕ್ಷೇತರ ಆಭ್ಯರ್ಥಿ ಸುಮಲತಾ ಅಂಬರೀಶ್ ಅವರೊಂದಿಗಿನ ಭೋಜನಕೂಟದ ವಿಡಿಯೋ ವೈರಲ್ ಆಗಿದ್ದು, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಕೈ ನಾಯಕರ ನಡೆಗೆ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನಿಖಿಲ್ ಅಭಿಮಾನಿಗಳು ಪೋಸ್ಟ್ ಹಾಕುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಜೆಡಿಎಸ್ ಮುಗಿಸಲು ಮೈತ್ರಿ ಸರ್ಕಾರದ ಹೆಸರಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಎಷ್ಟೇ ಪ್ರಯತ್ನಿಸಿದರೂ ನಿಖಿಲ್ ಗೆದ್ದೆ ಗೆಲ್ತಾರೆ. ಇದನ್ನು ತಪ್ಪಿಸಲು ಆಗಲ್ಲ. ದೇವೇಗೌಡರ ಕುಟುಂಬವನ್ನು ಎದುರು ಹಾಕಿಕೊಂಡವರು ನಾಳೆ ದೇಶದಲ್ಲಿ ಮಹಾಘಟ್ ಬಂಧನ್ ಆದ್ರೇ ಗೌಡರ ಮನೆ ಗೇಟ್ ನ್ನು ದೇಶದ ಕಾಂಗ್ರೆಸ್ ಅಧ್ಯಕ್ಷ ಕಾಯಬೇಕು. ಮಂಡ್ಯದ ಮೋಸದಿಂದ ನಮಗೆ ನಷ್ಟವಿಲ್ಲ. ಮೈಸೂರು, ಚಾಮರಾಜನಗರದಲ್ಲಿ ಇದ್ಯಾವ ಪರಿಣಾಮ ಬೀರುತ್ತದೆ ಅನ್ನೋದನ್ನು ಅರಗಿಸಿಕೊಳ್ಳಲು ಆಗಲ್ಲ ಅಭಿಮಾನಿಗಳು ಪೋಸ್ಟ್ ಹಾಕಿಕೊಂಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ತಮ್ಮ ಬೆಂಬಲಿಗರಿಗಾಗಿ ಭೋಜನ ಕೂಟ ಏರ್ಪಡಿಸಿದ್ದರು. ಕಾಂಗ್ರೆಸ್‍ನ ಮುಖಂಡರಾದ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಕೆ.ಬಿ.ಚಂದ್ರಶೇಖರ್, ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪುಟ್ಟರಾಜು ಹಾಗೂ ಅಮಾನತುಗೊಂಡ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಈ ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದರು. ಸದ್ಯ ಈ ಭೋಜನಕೂಟದ ವಿಡಿಯೋ ಲೀಕ್ ಆಗಿದ್ದು, ರಾಜಕೀಯ ಅಂಗಳದಲ್ಲಿ ಹೊಸ ಸಂಚಲನವನ್ನ ಸೃಷ್ಟಿಸಿದೆ.

Comments

Leave a Reply

Your email address will not be published. Required fields are marked *