ಐಪಿಎಲ್ ಪಂದ್ಯಕ್ಕೂ ಎಂಟ್ರಿ ಕೊಟ್ಟಿತ್ತು ‘ನಿಖಿಲ್ ಎಲ್ಲಿದ್ದೀಯಪ್ಪ’ ಡೈಲಾಗ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿರುವ ‘ನಿಖಿಲ್ ಎಲ್ಲಿದ್ದೀಯಪ್ಪ’ ಡೈಲಾಗ್ ಈಗ ಐಪಿಎಲ್ ಮ್ಯಾಚ್ ಸ್ಟೇಡಿಯಂನಲ್ಲೂ ಎಂಟ್ರಿ ಕೊಟ್ಟಿದೆ.

ಗುರುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಿತು. ಈ ವೇಳೆ ಯುವಕನೊಬ್ಬ ಕನ್ನಡ ಹಾಗೂ ಇಂಗ್ಲೀಷ್‍ನಲ್ಲಿ ‘ನಿಖಿಲ್ ಎಲ್ಲಿದ್ದೀಯಪ್ಪ’ ಎನ್ನುವ ಫಲಕವನ್ನು ಪ್ರದರ್ಶಿಸಿದ್ದಾರೆ.

‘ಜಾಗ್ವಾರ್’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ ‘ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಕೇಳಿದ್ದರು. ಈ ಡೈಲಾಗ್ ಈಗ ರಾಜ್ಯಾದ್ಯಂತ ಮನೆ ಮಾತಾಗಿದೆ. ರಾಜಕೀಯವಾಗಿ ಇದನ್ನು ಸಿಕ್ಕ ಸಿಕ್ಕ ರೀತಿಯಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಈ ಬಗ್ಗೆ ನಿಖಿಲ್ ಕೂಡ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದರು. “ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡೋರಿಗೆ, ಟ್ರೋಲ್ ಮಾಡೋರಿಗೆ ಒಂದು ಪದ ಬಳಸ್ತೀನಿ ತಪ್ಪು ತಿಳ್ಕೋಬೇಡಿ ಅಂದಿದ್ದರು. ಇಂಥವರೆಲ್ಲ ಸ್ಯಾಡಿಸ್ಟ್ ಗಳು, ಅವರು ವೋಟು ಹಾಕಲ್ಲ. ಅವರ ಬಗ್ಗೆ ನಾನು ತಲೆನೂ ಕೆಡಿಸಿಕೊಳ್ಳಲ್ಲ” ಎಂದು ಮಾತಿನ ಚಾಟಿ ಬೀಸಿದ್ದರು.

ಇಷ್ಟೇ ಅಲ್ಲ ನಮ್ಮ ಕಾರ್ಯಕರ್ತರು ಸಹ ಬಿಜೆಪಿ ಅವರು ಎಲ್ಲಿದ್ದೀರಪ್ಪ. ಮಂಡ್ಯದಲ್ಲಿ ಹುಡುಕ್ತಿದ್ದೀನಿ ಎಂದು ಟ್ರೋಲ್ ಮಾಡಿ ನನಗೂ ಕಳುಹಿಸುತ್ತಿದ್ದಾರೆ. ಬಟ್ ಇಟ್ಸ್ ನಾಟ್ ಗುಡ್ ಎಂದು ಹೇಳಿದ್ದರು. ಬಳಿಕ ಇಂತಹ ಟ್ರೋಲ್ ಮಾಡೋರಿಗೆ ಅಂದು ಆತ್ಮಹತ್ಯೆ ಮಾಡಿಕೊಂಡ 75 ರೈತ ಕುಟುಂಬಗಳಿಗೆ ಚೆಕ್ ವಿತರಿಸಿದ್ದು ಯಾಕೆ ಕಣ್ಣಿಗೆ ಕಾಣಿಸಲಿಲ್ಲ ಎಂದು ಪ್ರಶ್ನೆ ಕೂಡ ಹಾಕಿದ್ದರು. ನಾವೆಲ್ಲ ಇರೋದು ಗಾಜಿನ ಮನೆಯಲ್ಲಿ, ಒಡೆದರೆ ನಮ್ಮ ಮನೆ ಗಾಜು ಒಡೆದೋಗುತ್ತೆ, ಅವರ ಮನೆಯ ಗಾಜು ಕೂಡ ಒಡೆದೋಗುತ್ತೆ ಎಂದು ಕಿವಿಮಾತು ಹೇಳಿದ್ದರು.

Comments

Leave a Reply

Your email address will not be published. Required fields are marked *