ಸಿದ್ಧಾರ್ಥ್ ಮನೆಗೆ ನಿರ್ಮಲಾನಂದ ಸ್ವಾಮೀಜಿ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

– ಸಿದ್ಧಾರ್ಥ್ ಅಭಿಮಾನಿಗಳಿಂದ ಅಭಿಯಾನ

ಚಿಕ್ಕಮಗಳೂರು: ನಿಗೂಢವಾಗಿ ಸಾವನ್ನಪ್ಪಿರುವ ಕೆಫೆ ಕಾಫಿ ಡೇ ಮಾಲೀಕ ವಿ.ಜಿ ಸಿದ್ಧಾರ್ಥ್ ಅವರ ಮನೆಗೆ ಆದಿಚುಂಚನಗಿರಿ ಮಠದ ಸ್ವಾಮೀಜಿಗಳು ಇಂದು ಭೇಟಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟ್ ನಲ್ಲಿರುವ ಸಿದ್ದಾರ್ಥ್ ಮನೆಗೆ ಭೇಟಿ ನೀಡಿದ ಸ್ವಾಮೀಜಿಗಳು, ಸಿದ್ದಾರ್ಥ್ ತಾಯಿ ವಸಂತಿ ಹೆಗ್ಡೆ ಹಾಗೂ ಪತ್ನಿ ಮಾಳವಿಕಾ ಸೇರಿದಂತೆ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ.

ಯುವಕರಿಂದ ಅಭಿಯಾನ:
ಸಿದ್ಧಾರ್ಥ್ ಅವರು ಮೃತಪಟ್ಟ ಬಳಿಕ ಕಾಫಿ ಡೇ ಷೇರು ದಿನೇ, ದಿನೇ ಕುಸಿತ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಯುವಕರು ಅಭಿಯಾನಯೊಂದಕ್ಕೆ ಚಾಲನೆ ನೀಡಿದ್ದಾರೆ.

ಸಿದ್ದಾರ್ಥ್ ಅವರ ಅಭಿಮಾನಿ ಯುವಕರು `ಟೀಮ್ ನಮ್ಮುಡುಗ್ರು’ ತಂಡದಿಂದ ಷೇರು ಖರೀದಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾಗುತ್ತಿದೆ. ಸಿದ್ಧಾರ್ಥ್ ಅವರು ಕೆಫೆ ಕಾಫಿ ಡೇ ಸೇರಿದಂತೆ ಅವರ ಸಂಸ್ಥೆಗಳಲ್ಲಿ ಯುವಕರಿಗೆ ಹೆಚ್ಚಿನ ಅದ್ಯತೆ ನೀಡುತ್ತಿದ್ದರು. ಅಷ್ಟೇ ಅಲ್ಲದೇ ಯುವಕರಿಗೆ ತರಬೇತಿ ನೀಡಲೆಂದೇ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು.

Comments

Leave a Reply

Your email address will not be published. Required fields are marked *