ರದ್ದಾಗಿರುವ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಯೋಚನೆಯಿಲ್ಲ: ಕೇಂದ್ರ ಕೃಷಿ ಸಚಿವ

ನವದೆಹಲಿ: ರದ್ದುಪಡಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಶುಕ್ರವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ಇತ್ಯಾದಿ ವಿಷಯ ಸಂಬಂಧಪಟ್ಟ ರಾಜ್ಯ ಸರ್ಕಾರದಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಯಾವತ್ತೂ ಹಿಜಬ್, ಬುರ್ಖಾ ಪರ ಇಲ್ಲ: ಜಾವೇದ್ ಅಖ್ತರ್

ಈವರೆಗೆ 11.78 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ವಿವಿಧ ಕಂತುಗಳ ಮೂಲಕ ಅಂದಾಜು 1.82 ಕೋಟಿ ಮೊತ್ತವನ್ನು ಜಮಾ ಮಾಡಲಾಗಿದೆ. ಅವರಲ್ಲಿ 48.04 ಲಕ್ಷ ಮಂದಿ ಅನರ್ಹರು ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಕೋವಿಡ್‌ ಸಾಂಕ್ರಾಮಿಕ ಹೊರತಾಗಿಯೂ 2020-21ರ ಅವಧಿಯಲ್ಲಿ ಜಿಡಿಪಿಗೆ ಶೇ.1.6 ಪಾಲನ್ನು ಹೊಂದಿರುವ 3,09,939 ಕೋಟಿ ಮೊತ್ತದ ಕೃಷಿ ರಫ್ತುಗಳಲ್ಲಿ ಶೇ.22.8ರಷ್ಟು ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಿಸಿದ ಸರ್ಕಾರ

Comments

Leave a Reply

Your email address will not be published. Required fields are marked *