ಅಶ್ಲೀಲ ಪದ ಬಳಸಿ ನಿಂದನೆ – ಸಭೆಯಲ್ಲಿ ಕಾಮನ್ ಸೆನ್ಸ್ ಮರೆತ ಜೆಡಿಎಸ್ ಶಾಸಕ

ರಾಯಚೂರು: ಮಾನ್ವಿ ಶಾಸಕ ರಾಜಾವೆಂಕಟಪ್ಪ ನಾಯಕ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಪತ್ರಕರ್ತರ ಮೇಲೆ ಅಶ್ಲೀಲ ಪದ ಬಳಸಿ ಎಗರಾಡಿದ್ದಾರೆ.

ವೆಂಕಟಪ್ಪನವರು ನಗರದ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆ ಬಳಿಕ, ಸಚಿವ ಹಾಲಪ್ಪ ಆಚಾರ್‍ಗೆ ಪ್ರಶ್ನೆ ಕೇಳಿದ್ದ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ಎಗರಾಡಿ ಅಶ್ಲೀಲವಾಗಿ ನಿಂದಿಸಿದ್ದಾರೆ. ಇದನ್ನೂ ಓದಿ: ಮದುವೆ ಮನೆಯಲ್ಲಿ ಕೊರಗಜ್ಜನಿಗೆ ಅವಮಾನ – ಇಬ್ಬರು ಅರೆಸ್ಟ್, ಮದುಮಗ ನಾಪತ್ತೆ

ಮಾನ್ವಿಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಬಗ್ಗೆ ಪ್ರಶ್ನೆ ಮಾಡಿದಾಗ ಕೈ ಸನ್ನೆ ಮಾಡಿ ಅಸಂಬದ್ಧ ಪದ ಬಳಕೆ ಮಾಡಿದ್ದಾರೆ. ಪತ್ರಕರ್ತರು ಆಸ್ಪತ್ರೆಗೆ ವೈದ್ಯರಿಲ್ಲ, ಸಿಬ್ಬಂದಿಯಿಲ್ಲ, ಸಲಕರಣೆಗಳಿಲ್ಲದೆ ಕಟ್ಟಡ ಪೂರ್ಣವಾಗಿ ಮೂರೂವರೆ ವರ್ಷಗಳಾದ ಬಳಿಕ ಉದ್ಘಾಟನೆ ಮಾಡುತ್ತಿದ್ದು, ಆಸ್ಪತ್ರೆಗೆ ಸೌಲಭ್ಯಗಳು ಯಾವಾಗ ಕೊಡುತ್ತೀರಿ ಅಂತ ಪ್ರಶ್ನೆ ಕೇಳಿದ್ದಕ್ಕೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಸಚಿವರ ಎದುರಲ್ಲೇ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾಮಾನ್ಯ ತಿಳುವಳಿಕೆ ಇಲ್ಲದಂತೆ ವರ್ತಸಿದ್ದಾರೆ.

Comments

Leave a Reply

Your email address will not be published. Required fields are marked *