ಸಭೆ ವೇಳೆ ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಬ್ಯುಸಿಯಾದ ಅಧಿಕಾರಿ

ಚಿತ್ರದುರ್ಗ: ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಯು ದುರ್ವತನೆ ತೋರಿದ್ದು, ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಅಧಿಕಾರಿ ಬ್ಯುಸಿಯಾಗಿದ್ದ ಘಟನೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಿಗಧಿ ಮಾಡಲಾಗಿತ್ತು. ಆದರೆ ಈ ವೇಳೆ ಚಿತ್ರದುರ್ಗ ಜಿಲ್ಲಾ ಪಶು ಸಂಗೋಪನಾ ಇಲಾಖೆ ಅಧಿಕಾರಿ ರಾಜಪ್ಪ ಈ ರೀತಿ ದುರ್ವತನೆ ತೋರಿದ್ದಾರೆ. ಸಭೆಯಲ್ಲಿ ಅಧಿಕಾರಿಗಳು ಅಭಿವೃದ್ಧಿ ಪರಿಶೀಲನೆಯಲ್ಲಿ ತೊಡಗಿದ್ದರೆ ರಾಜಪ್ಪ ಅವರು ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಬ್ಯುಸಿಯಾಗಿದ್ದರು.

ಶಾಸಕ ಗೈರು: ಪ್ರಮುಖವಾಗಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಪರಿಶೀಲನೆ ಸಭೆಯನ್ನು ಸಂಸದ ಬಿ.ಎನ್.ಚಂದ್ರಪ್ಪ ನೇತೃತ್ವದಲ್ಲಿ ಕರೆಯಲಾಗಿತ್ತು. ಈ ಸಭೆ ಜಿಲ್ಲೆಯ ಎಲ್ಲಾ ಶಾಸಕರು ಆಗಮಿಸುವುದು ಕಡ್ಡಾಯವಾಗಿದ್ದರು. ಈ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಮೊಳಕಲ್ಮೂರು ಶಾಸಕ ಶ್ರೀರಾಮುಲು, ಹೊಸದುರ್ಗ ಶಾಸಕ ಶೇಖರ್ ಸಭೆಗೆ ಗೈರು ಹಾಜರಾಗಿದ್ದರು. ಅಲ್ಲದೇ ಎಂಎಲ್‍ಸಿ ಗಳಾದ ರಘು ಆಚಾರ್, ವೈ ಎ ನಾರಾಯಣ ಸ್ವಾಮಿ ಸಭೆ ಹಾಜರಾಗದೇ ನಿರ್ಲಕ್ಷ್ಯ ಮೆರೆದಿದ್ದಾರೆ.

https://www.youtube.com/watch?v=vZX67yMNpv4

Comments

Leave a Reply

Your email address will not be published. Required fields are marked *