ಅಪ್ರಾಪ್ತ ದಲಿತ ಬಾಲಕನಿಂದ ಕಾಲು ನೆಕ್ಕಿಸಿಕೊಂಡ ಕಿಡಿಗೇಡಿಗಳು – ವೀಡಿಯೋ ವೈರಲ್

ಲಕ್ನೋ: ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಮೇಲ್ಜಾತಿಯ ದುಷ್ಕರ್ಮಿಗಳು ಹಲ್ಲೆ ನಡೆಸಿ, ಅವರಲ್ಲಿ ಓರ್ವ ಬಾಲಕನಿಗೆ ಕಾಲು ನೆಕ್ಕಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

2 ನಿಮಿಷ 30 ಸೆಕೆಂಡ್‍ಗಳಿರುವ ಈ ವೀಡಿಯೋದಲ್ಲಿ ಬಾಲಕ ತನ್ನ ಕಿವಿಗಳ ಮೇಲೆ ಕೈಯಿಟ್ಟು ನೆಲದ ಮೇಲೆ ಮಂಡಿಯೂರಿ ಕುಳಿತಿರುವುದನ್ನು ಕಾಣಬಹುದಾಗಿದೆ. ಇದೇ ವೇಳೆ ಕಿಡಿಗೇಡಿಯೋರ್ವ ಮೋಟಾರ್ ಬೈಕ್ ಮೇಲೆ ಕುಳಿತು ತನ್ನ ಕಾಲು ನೆಕ್ಕುವಂತೆ ಹೇಳಿದ ತಕ್ಷಣ ಬಾಲಕ ನಡುಗುತ್ತಲೆ ಆತನ ಬಳಿ ಹೋಗಿ ಕಾಲನ್ನು ನೆಕ್ಕಿದ್ದಾನೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಯ್ಬರೇಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಅಪಘಾತವಾದರೆ ರಸ್ತೆ ಅಗೆದವರೆ ಹೊಣೆ – ಬಿಬಿಎಂಪಿಯಿಂದ ಆದೇಶ

ಈ ವಿಚಾರವಾಗಿ ಪ್ರತಿಕ್ರಿಯಿಸಿದ ರಾಯ್ಬರೇಲಿ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಅವರು, ಪ್ರಕರಣದ ಪ್ರಮುಖ ಆರೋಪಿ ಅಪ್ರಾಪ್ತ ವಯಸ್ಕನಾಗಿದ್ದು, ಆತನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ ಮತ್ತು ಉಳಿದಂತೆ ಅಭಿಷೇಕ್, ವಿಕಾಸ್ ಪಾಸಿ, ಮಹೇಂದ್ರ ಕುಮಾರ್, ಹೃತಿಕ್ ಸಿಂಗ್, ಅಮನ್ ಸಿಂಗ್ ಮತ್ತು ಯಶ್ ಪ್ರತಾಪ್‍ನನ್ನು ಸಹ ಬಂಧಿಸಲಾಗಿದೆ. ಹತ್ತನೇ ತರಗತಿಯ ದಲಿತ ವಿದ್ಯಾರ್ಥಿ ಕಾಲು ನೆಕ್ಕುವಂತೆ ಮಾಡಿದ ಇತರ ಆರೋಪಿಗಳ ಹುಡುಕಾಟವನ್ನು ಇನ್ನೂ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಬಿಸಿ ನಾಗೇಶ್

Comments

Leave a Reply

Your email address will not be published. Required fields are marked *