ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಶಂಕೆ- ಮಗ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ನಾರಾಯಣಪಲ್ಲಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

ಗ್ರಾಮದ ಮಂಜುನಾಥ್(45) ಹಾಗೂ ಅವರ ಪತ್ನಿ ಹನುಮಕ್ಕ(36) ಹಾಗೂ ಇವರ ಮಕ್ಕಳಾದ ಮುನಿರಾಜು(18) ಹಾಗೂ ಮುರುಳಿ(15) ಆತ್ಮಹತ್ಯೆಗೆ ಯತ್ನಿಸಿದವರು. ತೀವ್ರ ಅಸ್ವಸ್ಥರಾಗಿದ್ದ ನಾಲ್ವರನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುರುಳಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಒಳಚರಂಡಿಯಲ್ಲಿ ಅನಿಲ ಸ್ಫೋಟ 14 ಮಂದಿ ಸಾವು

ಉಳಿದ ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಕುಟುಂಬದವರೇ ಊಟದ ಜೊತೆ ವಿಷ ಬೆರೆಸಿ ತಿಂದಿದ್ದರಾ ಅಥವಾ ಆಕಸ್ಮಿಕ ಊಟದಲ್ಲಿ ವಿಷ ಬೆರೆತಿದೆಯಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಸದ್ಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರ ತನಿಖೆಯಿಂದ ಸತ್ಯ ತಿಳಿದುಬರಬೇಕಿದೆ. ಇದನ್ನೂ ಓದಿ:  ಗೋ ಹತ್ಯೆ ನಿಷೇಧ ಕಾಯ್ದೆ ನಂತ್ರ ಸಾವಿರಾರು ಗೋವುಗಳನ್ನ ರಕ್ಷಣೆ ಮಾಡಲಾಗಿದೆ: ಪ್ರಭು ಚೌವ್ಹಾಣ್

Comments

Leave a Reply

Your email address will not be published. Required fields are marked *