ಕುಮಾರಸ್ವಾಮಿ ಕನಸು ಕಾಣಲಿ ತಪ್ಪೇನಿಲ್ಲ, ಹಾಕಿರೋದು ಮಾತ್ರ 50 ರಿಂದ 60 ಸೀಟ್-ಡಿಕೆಶಿ ವ್ಯಂಗ್ಯ

ಹಾಸನ/ರಾಮನಗರ: ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕನಸು ಕಾಣೋದರಲ್ಲಿ ತಪ್ಪೇನಿಲ್ಲ. ಆದ್ರೆ ಚುನಾವಣೆ ಹಾಕಿರೋದು 50 ರಿಂದ 60 ಸೀಟ್ ಮಾತ್ರ ಅಂತಾ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ.

ಹಾಸನ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ 50 ರಿಂದ 60 ಸ್ವಂತ ಅಭ್ಯರ್ಥಿಗಳನ್ನು ಮಾತ್ರ ಕಣ್ಕಕೀಳಿಸಿದೆ. ಇನ್ನು ಉಳಿದಂತೆ ಕಾಂಗ್ರೆಸ್ ಹಾಗು ಬಿಜೆಪಿ ಟಿಕೆಟ್ ವಂಚಿತ ನಾಯಕರಿಗೆ ಜೆಡಿಎಸ್ ಟಿಕೆಟ್ ನೀಡಿದೆ. ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕಬೇಕೆಂದು ಹಾಕಿದೆ. ಮಾತಿಗೋಸ್ಕರ ನಾನು ರೈತನ ಮಗ, ಮಣ್ಣಿನ ಮಗ ಅಂತಾ ಹೇಳಿ ಕೊಳ್ಳಬಾರದು. ರಾಜ್ಯದ ರೈತರಿಗಾಗಿ ಕೆಲಸ ಮಾಡಬೇಕು. ಕಳೆದ 5 ವರ್ಷಗಳಲ್ಲಿ ಕಾಂಗ್ರೆಸ್ ಹಲವು ರೈತಪರ ಯೋಜನೆಗಳನ್ನು ಜಾರಿಗೆ ತಂದಿದೆ ಅಂತಾ ಹೇಳಿದ್ರು.

ಇತ್ತ ರಾಮನಗರದ ಚನ್ನಪಟ್ಟಣದಲ್ಲಿ ಅಮಿತ್ ಶಾ ಜೊತೆಗೆ ಹೆಚ್‍ಡಿಕೆ ಒಂದೇ ವಿಮಾನದಲ್ಲಿ ಪ್ರಯಾಣಿಸಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಅಮಿತ್ ಶಾ ಜೊತೆಗಿರುವ ದಾಖಲೆಗಳಿದ್ರೆ ಬಿಡುಗಡೆ ಮಾಡಲಿ. ಅವರಿಗೆ ಜವಬ್ದಾರಿ ಏನಾದ್ರೂ ಇದ್ರೆ ಈ ರೀತಿ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಲಿ. ಅಲ್ಲದೇ ಅಮಿತ್ ಶಾ ಭೇಟಿ ಮಾಡಲು ನನಗೆ ಏನು ಸಂಬಂಧ ಅವರೇನೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾ ಪ್ರವಾಸ ಮಾಡೋಕೆ ಅವರ ಜೊತೆಗೆ ವಿಮಾನದಲ್ಲಿ ಎಲ್ಲಿಗೆ ಹೋಗಲು ಸಾಧ್ಯ ಎಂದು ಪ್ರಶ್ನಿಸಿದ್ರು. ಅಲ್ಲದೇ ಹೀಗೆ ಹೇಳಿದ್ರೆ ಸಿಎಂ ಕುಡಿದು ಮಾತನಾಡುತ್ತಿದ್ದಾರೆ ಅಂತಾ ಜನ ಕಾಮೆಂಟ್ಸ್ ಮಾಡ್ತಾರೆ ಎಂದು ಕಿಡಿಕಾರಿದ್ರು.

Comments

Leave a Reply

Your email address will not be published. Required fields are marked *