ಆಪರೇಷನ್ ಹಸ್ತ ವದಂತಿ ಬೆನ್ನಲ್ಲೇ ಬಿಜೆಪಿ ನಾಯಕರ ಜೊತೆ ಡಿಕೆಶಿ ಆಪ್ತ ಮಾತುಕತೆ!

ಬೆಂಗಳೂರು: ಆಪರೇಷನ್ ಹಸ್ತದ (Operation Hasta) ವದಂತಿ ನಡುವೆ ಬಿಜೆಪಿ (BJP) ನಾಯಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಆಪ್ತ ಮಾತುಕತೆ ನಡೆಸಿದ ಫೋಟೋ ಈಗ ವೈರಲ್‌ ಆಗಿದ್ದಾರೆ.

ಖಾಸಗಿ ಹೋಟೆಲಿನಲ್ಲಿ ನಡೆದ ನಟ ಸುದೀಪ್ (Sudeep) ಹುಟ್ಟುಹಬ್ಬದ ಪಾರ್ಟಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಬಿ.ಸಿ.ಪಾಟೀಲ್ (BC Patil) ಹಾಗೂ ರಾಜೂ ಗೌಡ (Raju Gowda) ಜೊತೆ ಆಪ್ತ ಮಾತುಕತೆ ನಡೆಸಿದ್ದಾರೆ.  ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ

 

ಡಿಕೆಶಿ ಮಾತುಕತೆ ಫೋಟೋ ವೈರಲ್ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ನಾನಾ ಚರ್ಚೆ ಹುಟ್ಟುಹಾಕಿದೆ. ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬಿಸಿ ಪಾಟೀಲ್‌, ಕಾಮಾಲೆ ಕಣ್ಣಿಗೆ ಕಾಣವುದೆಲ್ಲ ಹಳದಿ ಅಂತೆ. ಇದೊಂದು ಆಕಸ್ಮಿಕ ಭೇಟಿ ಅಷ್ಟೇ. ಔಪಚಾರಿಕ ಚರ್ಚೆ, ಬೇರೆ ಯಾವುದೇ ಚರ್ಚೆ ಇಲ್ಲ. ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದೆವು. ಆಗ ಡಿಕೆ ಶಿವಕುಮಾರ್ ಅವರು ಬಂದಿದ್ದರು. ಅವರು ರಾಜ್ಯದ ಉಪಮುಖ್ಯಮಂತ್ರಿ. ಸಹಜವಾಗಿ ಗೌರವ ಕೊಟ್ಟು ಮಾತನಾಡಿಸಬೇಕಾಗುತ್ತದೆ. ಅದೇ ರೀತಿ ಮಾತನಾಡಿಸಿದ್ದೇವೆ ಹೊರತು ಬೇರೆ ಇಲ್ಲ. ಇದು ಆಕಸ್ಮಿಕ ಭೇಟಿ ಅಷ್ಟೇ, ಬೇರೆ ಅರ್ಥ ಬೇಡ ಎಂದು ಸ್ಪಷ್ಟನೆ ನೀಡಿದರು.

ರಾಜೂ ಗೌಡ ಪ್ರತಿಕ್ರಿಯಿಸಿ, ನಮ್ಮ ಭೇಟಿ ಆಕಸ್ಮಿಕ. ತಮಾಶೆ ಮಾಡಿಕೊಂಡು ಮಾತಾಡಿದ್ದೇವೆ. ನಮ್ಮ ಚರ್ಚೆ ರಾಜಕೀಯ ಹೊರತಾಗಿ ಇತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]